7:08 PM Monday7 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

ಅತ್ಯಾಚಾರ ದೂರು ನೀಡಿದ ಕಾಂಗ್ರೆಸ್‌ ಯುವ ನಾಯಕಿ ನವ್ಯಶ್ರೀಗೆ ವೈದ್ಯಕೀಯ ಪರೀಕ್ಷೆ: ವಿಚಾರಣೆಗೆ ಠಾಣೆಗೂ ಹಾಜರು

26/07/2022, 14:12

ಬೆಳಗಾವಿ(reporterkarnataka.com): ಕಾಂಗ್ರೆಸ್‌ ಯುವ ನಾಯಕಿ ನವ್ಯಶ್ರೀ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿ ರಾಜಕುಮಾರ ಟಾಕಳೆ ನಡುವಿನ ಆರೋಪ ಮತ್ತು ಪ್ರತ್ಯಾರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ನವ್ಯಶ್ರೀ ಅವರನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದೆ.

ಅದಲ್ಲದೆ ನವ್ಯಶ್ರೀ ಅವರು ಪೊಲೀಸ್‌ ಠಾಣೆಗೆ ಆಗಮಿಸಿ ವಿಚಾರಣೆಗೆ ಹಾಜರಾದರು.

ರಾಜಕುಮಾರ ಟಾಕಳೆ ವಿರುದ್ಧ ನವ್ಯಶ್ರೀ ನೀಡಿದ ದೂರಿನ ಸಂಬಂಧ ಮಾಹಿತಿ ಸಂಗ್ರಹ ಮಾಡುತ್ತಿದ್ದಾರೆ. ಜುಲೈ 23ರಂದು ಅತ್ಯಾಚಾರ, ಕಿಡ್ನಾಪ್‌, ಗರ್ಭಪಾತ, ಹನಿಟ್ರ್ಯಾಪ್‌, ಜೀವಬೆದರಿಕೆ ಆರೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಅತ್ಯಾಚಾರ, ಗರ್ಭಪಾತ ಪ್ರಕರಣ ಹಿನ್ನೆಲೆ ನವ್ಯಶ್ರೀಗೆ ವೈದ್ಯಕೀಯ ತಪಾಸಣೆಗೆ ಕರೆದೊಯ್ಯಲಾಗಿದ್ದು, ಎರಡು ದಿನಗಳ ಕಾಲ ವೈದ್ಯಕೀಯ ಪರೀಕ್ಷೆ ನಡೆಯಲಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. 

ಹಲ್ಲೆ ಮಾಡಿ ಬೆದರಿಕೆ, ಕಿಡ್ನಾಪ್‌ ಮಾಡಿದ ಆರೋಪ ಹಿನ್ನೆಲೆಯಲ್ಲಿ ನವ್ಯಶ್ರೀಯನ್ನು ಸ್ಥಳ ಮಹಜರುಗೆ ಕರೆದುಕೊಂಡು ಹೋಗುವ ಸಾಧ್ಯತೆ ಇದೆ.

ವಿಚಾರಣೆಗೆ ಹಾಜರಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನವ್ಯಶ್ರೀ , ರಾಜಕುಮಾರ ಟಾಕಳೆ ವಿರುದ್ಧ ದೂರು ನೀಡಿದ್ದು ಪೊಲೀಸರ ತನಿಖೆಗೆ ಸಹಕರಿಸಬೇಕಿದೆ. ಸತ್ಯವನ್ನು ಹೊರ ತರುತ್ತೇನೆ. ತೋಟಗಾರಿಕೆ ಇಲಾಖೆಯ ಅಧಿಕಾರಿ ರಾಜಕುಮಾರ ಟಾಕಳೆಯಿಂದ ನನಗೆ ಆದ ಅನ್ಯಾಯದ ವಿರುದ್ಧ ಈಗಾಗಲೇ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ. ಪೊಲೀಸರಿಗೆ ಸಹಕಾರ ನೀಡುವ ನಿಟ್ಟಿನಲ್ಲಿ ನಾನು ಬಂದಿದ್ದೇನೆ. ಸತ್ಯಾಸತ್ಯತೆ ಬಯಲಿಗೆ ತಂದು ರಾಜಕುಮಾರನಿಗೆ ಶಿಕ್ಷೆಯಾಗುವ ಹಾಗೆ ಮಾಡುತ್ತೇನೆ ಎಂದರು. 

ಪೊಲೀಸರು ಸ್ಥಳ ಮಹಜರ, ವೈದ್ಯಕೀಯ ತಪಾಸಣೆ ನಡೆಸಬೇಕಿದೆ. ಆದ್ದರಿಂದ ಈ ಪ್ರಕರಣದಲ್ಲಿ ನಾನು ಸಂಪೂರ್ಣ ತನಿಖೆಗೆ ಸಹಕಾರ ನೀಡುವೆ ಎಂದು ತಿಳಿಸಿದರು.

ನನ್ನ ವಿರುದ್ಧದ ಷಡ್ಯಂತ್ರದ ಹಿಂದೆ ಚೆನ್ನಪಟ್ಟಣದ ಮಹಾನಾಯಕ ಇದ್ದಾನೆ. ತಮ್ಮ ವಿರುದ್ಧದ ಬ್ಲಾಕ್ ಮೇಲ್ ಹಾಗೂ ವಂಚನೆ ಪ್ರಕರಣದ ಬಗ್ಗೆ ಕಾಂಗ್ರೆಸ್ ಯುವ ನಾಯಕಿ ನವ್ಯಶ್ರೀ ಪ್ರತಿಕ್ರಿಯಿಸಿದ್ದು, ಹೊಸ ಬಾಂಬ್ ಸಿಡಿಸಿದ್ದಾರೆ. ನವ್ಯಶ್ರೀ ಹಾಗೂ ತೋಟಗಾರಿಕೆ ಉಲಾಖೆಯ ಸಹಾಯಕ ನಿರ್ದೇಶಕ ರಾಜಕುಮಾರ್ ಟಾಕಳೆ ತಿಕ್ಕಾಟ ರಾಜಕೀಯ ಸ್ವರೂಪ ಪಡೆದುಕೊಂಡಿದೆ.  ನವ್ಯಶ್ರೀ ರಾಸಲೀಲೆ ವಿಡಿಯೋ ಹರಿಬಿಟ್ಟರುವುದರ ಹಿಂದೆ ಕಾಂಗ್ರೆಸ್ ಮಹಾನಾಯಕರೊಬ್ಬರ ಕೈವಾಡವಿದೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಆದ್ರೆ, ನವ್ಯಶ್ರೀ ಆ ಮಹಾನಾಯಕನ ಹೆಸರು ಹೇಳಿಲ್ಲ. ಇದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

ಈ ಬಗ್ಗೆ ಬೆಳಗಾವಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ನವ್ಯಶ್ರೀ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ ಹಾಗೂ ರಾಷ್ಟ್ರೀಯ ನಾಯಕರ ಜತೆ ಇರುವ ಫೋಟೋ ಇಟ್ಟುಕೊಂಡು ಅಪಪ್ರಚಾರ ಮಾಡಲಾಗುತ್ತಿದೆ. ರಾಜಕುಮಾರ್ ಟಾಕಳೆ ಹಾಗೂ ನನ್ನ ನಡುವಿನ ಕಿತ್ತಾಟದ ಹಿಂದೆ ಕಾಂಗ್ರೆಸ್ ನ ಮಹಾನಾಯಕರೊಬ್ಬರಿದ್ದಾರೆ. ಅವರು ಟಾಕಳೆಯನ್ನು ದಾಳವನ್ನಾಗಿ ಮಾಡಿಕೊಂಡು ಷಡ್ಯಂತ್ರ ನಡೆಸಿದ್ದಾರೆ ಎಂದು ಆರೋಪಿಸಿದರು. ಇದೆಲ್ಲದರ ಹಿಂದೆ ಇರುವವರು ಚೆನ್ನಪಟ್ಟಣದ ಕಾಂಗ್ರೆಸ್ ಮಹಾನಾಯಕ. ಅವರು ಮುಂದಿನ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗುವ ತವಕದಲ್ಲಿದ್ದಾರೆ.  ಅವರ ಜತೆ ಪತ್ರಿಕಾ ಸಂಪಾದಕರೊಬ್ಬರಿದ್ದಾರೆ. ಅವರ ಹೆಸರನ್ನು ನಾನು ಹೇಳಲ್ಲ. ತನಿಖೆ ಬಳಿಕ ಎಲ್ಲರ ಮುಖವಾಡ ಕಳಚಲಿದೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು