4:42 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಅತ್ಯಾಚಾರ, ಕೊಲೆಗೀಡಾದ ಸೌಜನ್ಯ ಪರ ಮಹಾಧರಣಿಯಲ್ಲಿ ಭಾಗವಹಿಸಲು ಎಐಟಿಯುಸಿ ಕರೆ

26/08/2023, 11:03

ಮಂಗಳೂರು(reporterkarnataka.com): ದೇಶದ ಕಾನೂನು ವ್ಯವಸ್ಥೆಯ ಬಗ್ಗೆ ಅಪನಂಬಿಕೆಗೆ ಕಾರಣವಾದ ಧರ್ಮಸ್ಥಳದ ಸೌಜನ್ಯ ಪ್ರಕರಣವನ್ನು ಮರು ತನಿಖೆ ಮಾಡಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯನ್ನು ವಿಧಿಸಬೇಕೆಂದು ಒತ್ತಾಯಿಸಿ ಸಮಾನ ಮನಸ್ಕ ಸಂಘಟನೆಗಳು ಆಗಸ್ಟ್ 28 ರಂದು ನಡೆಸುವ ಮಹಾಧರಣಿಯಲ್ಲಿ ಎಐಟಿಯುಸಿಯ ಸದಸ್ಯರು ಹಾಗೂ ಕಾರ್ಮಿಕ ವರ್ಗ ಸಕ್ರಿಯವಾಗಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಎಐಟಿಯುಸಿ (ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್) ದ.ಕ ಮತ್ತು ಉಡುಪಿ ಜಿಲ್ಲಾ ಸಮಿತಿ ಕರೆ ನೀಡಿದೆ.
ನಿಜವಾದ ಆರೋಪಿಗಳನ್ನು ಪತ್ತೆ ಹಚ್ಚುವ ಬದಲು ನಿರಪರಾಧಿ ಸಂತೋಷ್ ರಾವ್‍ನನ್ನು ಫಿಕ್ಸ್ ಮಾಡಿ ಆತನ ಬದುಕುವ ಹಕ್ಕನ್ನು ಕಸಿಯಲಾಗಿದೆ. ಸೌಜನ್ಯ ಪ್ರಕರಣದಲ್ಲಿ ಪ್ರಾರಂಭಿಕ ಹಂತದಲ್ಲಿ ಸಂಗ್ರಹಿಸಬೇಕಾದ ಸಾಕ್ಷಾಧಾರಗಳನ್ನು ಕಾನೂನುಬದ್ದವಾಗಿ ಸಂಗ್ರಹಿಸದೆ, ಸುಸಮಯದಲ್ಲಿ ಸಾಕ್ಷ್ಯ ಮಾದರಿಗಳನ್ನು ಪರಿಶೋಧಿಸದೆ ಈ ಪ್ರಕರಣ ಮುಚ್ಚಿಹೋಗಲು ಕುಕೃತ್ಯವೆಸಗಿದ ಅಧಿಕಾರಿಗಳನ್ನು ಹಾಗೂ ಅವರ ಕುಕೃತ್ಯಕ್ಕೆ ಒತ್ತಡ ಹೇರಿದ ಕಾಣದ ಕುಳಗಳನ್ನು ಸೂಕ್ತ ತನಿಖೆಗೆ ಒಳಪಡಿಸಿದರೆ ಸೌಜನ್ಯ ಪ್ರಕರಣಕ್ಕೆ ನ್ಯಾಯ ಸಿಗಲು ಸಾಧ್ಯ. ಈ ಮಹಾಧರಣಿಯಲ್ಲಿ ನಾವೆಲ್ಲರೂ ಭಾಗವಹಿಸಿ ಸೌಜನ್ಯ ಪ್ರಕರಣ ಸೇರಿದಂತೆ ಈ ಹಿಂದೆ ನಡೆದ ಪದ್ಮಲತಾ, ಆನೆ ಮಾವುತರ ಕೊಲೆ ಪ್ರಕರಣಗಳನ್ನು ಸರಕಾರ ಮರುತನಿಖೆ ಮಾಡಿಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗಲು ಆ ಮೂಲಕ ಸ್ವಾಸ್ಥ್ಯ ಮತ್ತು ನಿರ್ಬೀತಿ ಸಮಾಜ ನಿರ್ಮಿಸಲು ಮಹಾಜನತೆ ಬದ್ಧರಾಗಬೇಕೆಂದು ಎಐಟಿಯುಸಿ ದ.ಕ ಮತ್ತು ಉಡುಪಿ ಜಿಲ್ಲಾ ಸಮಿತಿಯ ಪರವಾಗಿ ಅಧ್ಯಕ್ಷರಾದ ಹೆಚ್.ವಿ ರಾವ್ ಹಾಗೂ ಪ್ರಧಾನ ಕಾರ್ಯದರ್ಶಿ ವಿ.ಎಸ್.ಬೇರಿಂಜ ಕಾರ್ಮಿಕರಿಗೆ ಕರೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು