3:39 AM Sunday23 - August 2026
ಬ್ರೇಕಿಂಗ್ ನ್ಯೂಸ್
*ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಇತ್ತೀಚಿನ ಸುದ್ದಿ

ಅತ್ಯಾಚಾರಕ್ಕೀಡಾದ ಬಾಲಕಿಯ ಫೋಟೋ ಪ್ರಕಟ: ಇಬ್ಬರು ಪತ್ರಕರ್ತರಿಗೆ 1 ವರ್ಷ ಜೈಲು, 25 ಸಾವಿರ ರೂ. ದಂಡ

02/09/2023, 20:47

ಸಾಂದರ್ಭಿಕ ಚಿತ್ರ
ಮಡಿಕೇರಿ(reporterkarnataka.com): ಅತ್ಯಾಚಾರ ಹಾಗೂ ಕೊಲೆಗೀಡಾದ ಅಪ್ರಾಪ್ತ ಬಾಲಕಿಯ ಫೋಟೋ ಪ್ರಕಟಿಸಿದ ಇಬ್ಬರು ಪತ್ರಕರ್ತರಿಗೆ 2ನೇ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ ಒಂದು ವರ್ಷ ಸಜೆ ಹಾಗೂ 25 ಸಾವಿರ ರೂ. ದಂಡ ವಿಧಿಸಿದೆ.
2019 ರಲ್ಲಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕಣದ ಸುದ್ದಿಯನ್ನು ಸಿದ್ದಾಪುರದ ವಸಂತ್ ಕುಮಾರ್ ತಾನು ವರದಿಗಾರನಾಗಿದ್ದ ಕಾವೇರಿ ಟೈಮ್ಸ್ ಪತ್ರಿಕೆಯಲ್ಲಿ ಕಾನೂನುಬಾಹಿರವಾಗಿ ಬಾಲಕಿಯ ಫೋಟೋ ಬಳಸಿ ಸುದ್ದಿ ಮಾಡಿದ್ದರು.
ಅಪ್ರಾಪ್ತೆಯ ಸಹೋದರ ನೀಡಿದ ದೂರಿನ ಮೇರೆಗೆ ವಸಂತ್ ಹಾಗೂ ಕಾವೇರಿ ಟೈಮ್ಸ್ ಪತ್ರಿಕೆಯ ಮಾಲಿಕ ನಂಜಪ್ಪ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ಮುಗಿಸಿದ ವಿರಾಜಪೇಟೆಯ 2ನೇ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಸುಜಾತ ಅವರು ಆರೋಪಿಗಳಾದ ವಸಂತ್ ಹಾಗೂ ನಂಜಪ್ಪ ಎಂಬುವವರಿಗೆ ಒಂದು ವರ್ಷದ ಸಜೆ ಮತ್ತು 25,000ರೂ. ದಂಡ ವಿಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು