11:50 PM Sunday17 - May 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ…

ಇತ್ತೀಚಿನ ಸುದ್ದಿ

ಅತ್ಯಾಚಾರಕ್ಕೀಡಾದ ಬಾಲಕಿಯ ಫೋಟೋ ಪ್ರಕಟ: ಇಬ್ಬರು ಪತ್ರಕರ್ತರಿಗೆ 1 ವರ್ಷ ಜೈಲು, 25 ಸಾವಿರ ರೂ. ದಂಡ

02/09/2023, 20:47

ಸಾಂದರ್ಭಿಕ ಚಿತ್ರ
ಮಡಿಕೇರಿ(reporterkarnataka.com): ಅತ್ಯಾಚಾರ ಹಾಗೂ ಕೊಲೆಗೀಡಾದ ಅಪ್ರಾಪ್ತ ಬಾಲಕಿಯ ಫೋಟೋ ಪ್ರಕಟಿಸಿದ ಇಬ್ಬರು ಪತ್ರಕರ್ತರಿಗೆ 2ನೇ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ ಒಂದು ವರ್ಷ ಸಜೆ ಹಾಗೂ 25 ಸಾವಿರ ರೂ. ದಂಡ ವಿಧಿಸಿದೆ.
2019 ರಲ್ಲಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕಣದ ಸುದ್ದಿಯನ್ನು ಸಿದ್ದಾಪುರದ ವಸಂತ್ ಕುಮಾರ್ ತಾನು ವರದಿಗಾರನಾಗಿದ್ದ ಕಾವೇರಿ ಟೈಮ್ಸ್ ಪತ್ರಿಕೆಯಲ್ಲಿ ಕಾನೂನುಬಾಹಿರವಾಗಿ ಬಾಲಕಿಯ ಫೋಟೋ ಬಳಸಿ ಸುದ್ದಿ ಮಾಡಿದ್ದರು.
ಅಪ್ರಾಪ್ತೆಯ ಸಹೋದರ ನೀಡಿದ ದೂರಿನ ಮೇರೆಗೆ ವಸಂತ್ ಹಾಗೂ ಕಾವೇರಿ ಟೈಮ್ಸ್ ಪತ್ರಿಕೆಯ ಮಾಲಿಕ ನಂಜಪ್ಪ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ಮುಗಿಸಿದ ವಿರಾಜಪೇಟೆಯ 2ನೇ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಸುಜಾತ ಅವರು ಆರೋಪಿಗಳಾದ ವಸಂತ್ ಹಾಗೂ ನಂಜಪ್ಪ ಎಂಬುವವರಿಗೆ ಒಂದು ವರ್ಷದ ಸಜೆ ಮತ್ತು 25,000ರೂ. ದಂಡ ವಿಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು