11:38 PM Friday3 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ಅತ್ಯಾಚಾರಕ್ಕೀಡಾದ ಬಾಲಕಿಯ ಫೋಟೋ ಪ್ರಕಟ: ಇಬ್ಬರು ಪತ್ರಕರ್ತರಿಗೆ 1 ವರ್ಷ ಜೈಲು, 25 ಸಾವಿರ ರೂ. ದಂಡ

02/09/2023, 20:47

ಸಾಂದರ್ಭಿಕ ಚಿತ್ರ
ಮಡಿಕೇರಿ(reporterkarnataka.com): ಅತ್ಯಾಚಾರ ಹಾಗೂ ಕೊಲೆಗೀಡಾದ ಅಪ್ರಾಪ್ತ ಬಾಲಕಿಯ ಫೋಟೋ ಪ್ರಕಟಿಸಿದ ಇಬ್ಬರು ಪತ್ರಕರ್ತರಿಗೆ 2ನೇ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ ಒಂದು ವರ್ಷ ಸಜೆ ಹಾಗೂ 25 ಸಾವಿರ ರೂ. ದಂಡ ವಿಧಿಸಿದೆ.
2019 ರಲ್ಲಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕಣದ ಸುದ್ದಿಯನ್ನು ಸಿದ್ದಾಪುರದ ವಸಂತ್ ಕುಮಾರ್ ತಾನು ವರದಿಗಾರನಾಗಿದ್ದ ಕಾವೇರಿ ಟೈಮ್ಸ್ ಪತ್ರಿಕೆಯಲ್ಲಿ ಕಾನೂನುಬಾಹಿರವಾಗಿ ಬಾಲಕಿಯ ಫೋಟೋ ಬಳಸಿ ಸುದ್ದಿ ಮಾಡಿದ್ದರು.
ಅಪ್ರಾಪ್ತೆಯ ಸಹೋದರ ನೀಡಿದ ದೂರಿನ ಮೇರೆಗೆ ವಸಂತ್ ಹಾಗೂ ಕಾವೇರಿ ಟೈಮ್ಸ್ ಪತ್ರಿಕೆಯ ಮಾಲಿಕ ನಂಜಪ್ಪ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ಮುಗಿಸಿದ ವಿರಾಜಪೇಟೆಯ 2ನೇ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಸುಜಾತ ಅವರು ಆರೋಪಿಗಳಾದ ವಸಂತ್ ಹಾಗೂ ನಂಜಪ್ಪ ಎಂಬುವವರಿಗೆ ಒಂದು ವರ್ಷದ ಸಜೆ ಮತ್ತು 25,000ರೂ. ದಂಡ ವಿಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು