2:51 PM Tuesday16 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ…

ಇತ್ತೀಚಿನ ಸುದ್ದಿ

ಅತ್ಯಧಿಕ ಮಾದಕ ವಸ್ತುಗಳ ಬಳಕೆ: ಕೇಂದ್ರ ಸರಕಾರದ ಪಟ್ಟಿಯಲ್ಲಿ ಉಡುಪಿ, ಕೊಡಗು ಸೇರಿ ರಾಜ್ಯದ 6 ಜಿಲ್ಲೆ

12/02/2022, 12:07

ಹೊಸದಿಲ್ಲಿ(reporterkarnataka.com): ಮಾದಕ ವಸ್ತುಗಳನ್ನು ಅತ್ಯಧಿಕವಾಗಿ ಬಳಕೆ ಮಾಡುತ್ತಿರುವ 272 ಜಿಲ್ಲೆಗಳನ್ನು ಕೇಂದ್ರ ಸರಕಾರ ಪಟ್ಟಿ ಮಾಡಿದ್ದು, ಇದರಲ್ಲಿ ಕೊಡಗು, ಉಡುಪಿ ಸೇರಿದಂತೆ ಕರ್ನಾಟಕದ ಆರು ಜಿಲ್ಲೆಗಳು ಸೇರಿವೆ.

ಬಿಜೆಪಿಯ ಕೆ.ಸಿ.ರಾಮಮೂರ್ತಿ ಅವರು ಕೇಳಿದ ಪ್ರಶ್ನೆಗೆ ರಾಜ್ಯಸಭೆಯಲ್ಲಿ ಉತ್ತರಿಸಿರುವ ಕೇಂದ್ರದ ಸಾಮಾಜಿಕ ನ್ಯಾಯ ಖಾತೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಅವರು ಈ ವಿಷಯ ತಿಳಿಸಿದ್ದಾರೆ.

ದೇಶದ 272 ಜಿಲ್ಲೆಗಳನ್ನು ಅತ್ಯಧಿಕ ಮಾದಕವಸ್ತು ಬಳಸುವ ಜಿಲ್ಲೆಗಳೆಂದು ಪಟ್ಟಿ ಮಾಡಲಾಗಿದ್ದು, ಇದರಲ್ಲಿ ಕರ್ನಾಕರದ ಬೆಂಗಳೂರು, ಕೋಲಾರ, ಮೈಸೂರು, ಕೊಡಗು, ಉಡುಪಿ ಮತ್ತು ರಾಮನಗರ ಜಿಲ್ಲೆಗಳೂ ಸೇರಿವೆ. ಈ ಜಿಲ್ಲೆಗಳಲ್ಲಿ ‘ನಶೆ ಮುಕ್ತ ಭಾರತ ಅಭಿಯಾನ’ ಜಾರಿಗೊಳಿಸಲಾಗುತ್ತಿದೆ ಎಂದು ಸಚಿವರು ವಿವರಿಸಿದ್ದಾರೆ.

ನಶೆ ಮುಕ್ತ ಭಾರತ ಅಭಿಯಾನದಡಿ ಮಾದಕವಸ್ತು ವ್ಯಸನಿಗಳನ್ನು ಗುರುತಿಸಿ ಸ್ವಯಂಸೇವಕರು ಸಮಾಲೋಚನೆ ನಡೆಸಲಿದ್ದು, ಅವರನ್ನು ವ್ಯಸನ ಮುಕ್ತರನ್ನಾಗಿಸಲು ಒತ್ತು ನೀಡುವರು. ಈ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸೇವಾ ಸಂಸ್ಥೆಗಳೂ ಈ ಕಾರ್ಯಕ್ಕೆ ನೆರವಾಗಲಿದ್ದು, ಸಹಜ ಜೀವನಕ್ಕೆ ಮರಳುವಂತೆ ವ್ಯಸನಿಗಳಿಗೆ ಚಿಕಿತ್ಸೆ ನೀಡುವುದರೊಂದಿಗೆ ಅವರನ್ನು ಸಮಾಜದ‌ ಮುಖ್ಯವಾಹಿನಿಗೆ ತರಲು ಪ್ರಯತ್ನಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು