11:28 PM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಅತ್ಯಧಿಕ ಮಾದಕ ವಸ್ತುಗಳ ಬಳಕೆ: ಕೇಂದ್ರ ಸರಕಾರದ ಪಟ್ಟಿಯಲ್ಲಿ ಉಡುಪಿ, ಕೊಡಗು ಸೇರಿ ರಾಜ್ಯದ 6 ಜಿಲ್ಲೆ

12/02/2022, 12:07

ಹೊಸದಿಲ್ಲಿ(reporterkarnataka.com): ಮಾದಕ ವಸ್ತುಗಳನ್ನು ಅತ್ಯಧಿಕವಾಗಿ ಬಳಕೆ ಮಾಡುತ್ತಿರುವ 272 ಜಿಲ್ಲೆಗಳನ್ನು ಕೇಂದ್ರ ಸರಕಾರ ಪಟ್ಟಿ ಮಾಡಿದ್ದು, ಇದರಲ್ಲಿ ಕೊಡಗು, ಉಡುಪಿ ಸೇರಿದಂತೆ ಕರ್ನಾಟಕದ ಆರು ಜಿಲ್ಲೆಗಳು ಸೇರಿವೆ.

ಬಿಜೆಪಿಯ ಕೆ.ಸಿ.ರಾಮಮೂರ್ತಿ ಅವರು ಕೇಳಿದ ಪ್ರಶ್ನೆಗೆ ರಾಜ್ಯಸಭೆಯಲ್ಲಿ ಉತ್ತರಿಸಿರುವ ಕೇಂದ್ರದ ಸಾಮಾಜಿಕ ನ್ಯಾಯ ಖಾತೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಅವರು ಈ ವಿಷಯ ತಿಳಿಸಿದ್ದಾರೆ.

ದೇಶದ 272 ಜಿಲ್ಲೆಗಳನ್ನು ಅತ್ಯಧಿಕ ಮಾದಕವಸ್ತು ಬಳಸುವ ಜಿಲ್ಲೆಗಳೆಂದು ಪಟ್ಟಿ ಮಾಡಲಾಗಿದ್ದು, ಇದರಲ್ಲಿ ಕರ್ನಾಕರದ ಬೆಂಗಳೂರು, ಕೋಲಾರ, ಮೈಸೂರು, ಕೊಡಗು, ಉಡುಪಿ ಮತ್ತು ರಾಮನಗರ ಜಿಲ್ಲೆಗಳೂ ಸೇರಿವೆ. ಈ ಜಿಲ್ಲೆಗಳಲ್ಲಿ ‘ನಶೆ ಮುಕ್ತ ಭಾರತ ಅಭಿಯಾನ’ ಜಾರಿಗೊಳಿಸಲಾಗುತ್ತಿದೆ ಎಂದು ಸಚಿವರು ವಿವರಿಸಿದ್ದಾರೆ.

ನಶೆ ಮುಕ್ತ ಭಾರತ ಅಭಿಯಾನದಡಿ ಮಾದಕವಸ್ತು ವ್ಯಸನಿಗಳನ್ನು ಗುರುತಿಸಿ ಸ್ವಯಂಸೇವಕರು ಸಮಾಲೋಚನೆ ನಡೆಸಲಿದ್ದು, ಅವರನ್ನು ವ್ಯಸನ ಮುಕ್ತರನ್ನಾಗಿಸಲು ಒತ್ತು ನೀಡುವರು. ಈ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸೇವಾ ಸಂಸ್ಥೆಗಳೂ ಈ ಕಾರ್ಯಕ್ಕೆ ನೆರವಾಗಲಿದ್ದು, ಸಹಜ ಜೀವನಕ್ಕೆ ಮರಳುವಂತೆ ವ್ಯಸನಿಗಳಿಗೆ ಚಿಕಿತ್ಸೆ ನೀಡುವುದರೊಂದಿಗೆ ಅವರನ್ನು ಸಮಾಜದ‌ ಮುಖ್ಯವಾಹಿನಿಗೆ ತರಲು ಪ್ರಯತ್ನಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು