1:32 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಆಡಿಯೋದಲ್ಲಿರುವುದು ನನ್ನ ಧ್ವನಿಯಲ್ಲ, ಅದು ಕಿಡಿಗೇಡಿಗಳ ಕೃತ್ಯ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಸ್ಪಷ್ಟನೆ

19/07/2021, 12:52

ಮಂಗಳೂರು(reporterkarnataka news): ಆಡಿಯೋದಲ್ಲಿರುವುದು ನನ್ನ ಧ್ವನಿಯಲ್ಲ. ಯಾರೋ ಕಿಡಿಗೇಡಿಗಳು ಆಡಿಯೋ ಸೃಷ್ಟಿಸಿದ್ದಾರೆ. ಈ ಕುರಿತು ನ್ಯಾಯಾಲಯಕ್ಕೆ ಹೋಗುವ ಚಿಂತನೆ ನಡೆಸಿದ್ದೇನೆ. ಇದರ ಬಗ್ಗೆ ತನಿಖೆ ನಡೆಯಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸ್ಪಷ್ಟೀಕರಣ ನೀಡಿದ್ದಾರೆ.

ಬಿಜೆಪಿ ಅಧ್ಯಕ್ಷರದ್ದು ಎನ್ನಲಾದ ಆಡಿಯೋ ವೈರಲ್ ಆಗುತ್ತಿದ್ದಂತೆ ನಳಿನ್ ಕುಮಾರ್ ಕಟೀಲ್ ಸ್ಪಷ್ಟನೆ ನೀಡಿದ್ದಾರೆ. ಮುಖ್ಯಮಂತ್ರಿಯವರಿಗೆ ಈ ಕುರಿತು ಪತ್ರ ಬರೆಯುತ್ತೇನೆ. ತನಿಖೆಯಿಂದ ಸತ್ಯಾಸತ್ಯತೆ ಹೊರಬೀಳಲಿದೆ ಎಂದರು.

ಪಕ್ಷದಲ್ಲಿ ನಾಯಕತ್ವ ಬದಲಾವಣೆ ಕುರಿತು ಯಾವುದೇ ಚರ್ಚೆಗಳಿಲ್ಲ. ನಮ್ಮ ಪಕ್ಷಕ್ಕೆ ಯಡಿಯೂರಪ್ಪ ಅವರು ಆತ್ಮವಿದ್ದಂತೆ. ಅವರು ನಮ್ಮ ಪಕ್ಷದ ಸರ್ವ ಸಮ್ಮತದ ನಾಯಕ. ಈಶ್ವರಪ್ಪ ಹಾಗೂ ಜಗದೀಶ್ ಶೆಟ್ಟರ್ ಅವರು ಪಕ್ಷದ ಎರಡು ಕಣ್ಣುಗಳಿದ್ದಂತೆ ಎಂದು ನಳಿನ್ ಪ್ರತಿಕ್ರಿಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು