1:05 PM Monday20 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ…

ಇತ್ತೀಚಿನ ಸುದ್ದಿ

ಧರೆಗೆ ಉರುಳಿದ 200 ವರ್ಷಗಳ ಇತಿಹಾಸವಿರುವ ಔದುಂಬರ ವೃಕ್ಷ: ಮಡಿಕೇರಿಯ ಮ್ಯಾನ್ ಕಾಂಪೌಂಡ್ ನಲ್ಲಿದ್ದ ಮರ

02/07/2025, 20:34

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗನ್ನು ಆಳಿದ ರಾಜರ ಕಾಲದಲ್ಲಿ ಆನೆಗಳನ್ನು ಕಟ್ಟಿ ಹಾಕುತ್ತಿದ್ದ ಬೃಹತ್ ಗಾತ್ರದ ಮರಗಳಲ್ಲಿ ಒಂದು ಮರ ಇದುವರೆಗೂ ಬದುಕಿ ಎಲ್ಲರಿಗೂ ಆಶ್ರಯ ನೀಡಿತ್ತು. ಆದರೆ ಇಂದು ಇನ್ನೂರಕ್ಕೂ ಹೆಚ್ಚು ವರ್ಷಗಳ ಇತಿಹಾಸ ಹೊಂದಿದ್ದ ಮಡಿಕೇರಿಯ ಮ್ಯಾನ್ ಕಾಂಪೌಂಡ್ ಆವರಣದಲ್ಲಿರುವ ಔದುಂಬರ ವೃಕ್ಷ (ಅತ್ತಿ ಹಣ್ಣಿನ ಮರ.. fig) ಮರದ ಅರ್ಧಭಾಗ ಧರೆಗೆ ಉರುಳುವ ದೃಶ್ಯವನ್ನು ಮರದ ಸಮೀಪವೇ ಇರುವ ಅಂಗಡಿಯ ಮಾಲೀಕ ಪಿ.ಎಂ ರವಿ ಸೆರೆ ಹಿಡಿದಿದ್ದಾರೆ.



ಮೈದಾನದಲ್ಲಿ ಆಟವಾಡಿ ದಣಿದವರಿಗೆ ಆಶ್ರಯ ನೀಡುತ್ತಿದ್ದ ಈ ಮರ ಅದರಲ್ಲಿರುವ ಸಕಾರಾತ್ಮಕ ಶಕ್ತಿಯನ್ನು ಎಲ್ಲರಿಗೂ ಪಸರಿಸಿದೆ. ಹಾಗೆ ಈ ಮರದ ಸುತ್ತ ಕಟ್ಟೆಯನ್ನು ಕಟ್ಟಿ ಹಬ್ಬ ಹರಿ ದಿನಗಳಲ್ಲಿ ಇದರ ಸುತ್ತ ಕೊಡವರ ಸಾಂಪ್ರದಾಯಿಕ ನೃತ್ಯಗಳು, ಇದೆ ಕೋಲ್ ಮಂದ್ ನಲ್ಲಿ ನಡೆಯುತ್ತಿತ್ತು. ಸಣ್ಣ ಮಕ್ಕಳಿಂದ ಹಿಡಿದು ದೊಡ್ಡವರಿಗೆ ನೆರಳಿನ ಆಶ್ರಯ ನೀಡುತ್ತಿದ್ದ ಈ ಮರದ ಅರ್ಧ ಭಾಗ ಇಂದು ಮಧ್ಯಾಹ್ನ 3:30ರ ವೇಳೆಗೆ ಧರೆಗೆ ಉರುಳಿದ್ದು, ಉಳಿದ ಭಾಗ ಬೀಳುವ ಹಂತದಲ್ಲಿ ನೆಲೆ ನಿಂತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು