1:20 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಆಗಸ್ಟ್‌ 12ರಂದು ಮಂಗಳೂರು ಪುರಭವನದಲ್ಲಿ ಭ್ರಾಮರೀ ಯಕ್ಷವೈಭವ: ಕೃಷ್ಣ ಗಾಣಿಗರಿಗೆ ಯಕ್ಷಮಣಿ ಪ್ರಶಸ್ತಿ

08/08/2023, 12:04

ಮಂಗಳೂರು(reporterkarnataka.com) :ಭ್ರಾಮರೀ ಯಕ್ಷಮಿತ್ರರು ಮಂಗಳೂರು ಟ್ರಸ್ಟ್ ಆಶ್ರಯದಲ್ಲಿ ಆಗಸ್ಟ್ 12 ಶನಿವಾರದಂದು ಸಂಜೆ 7 ರಿಂದ ಮರುದಿನ ಮುಂಜಾನೆಯವರೆಗೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಆರನೇ ವರ್ಷದ ಭ್ರಾಮರೀ ಯಕ್ಷವೈಭವ – 2023 ಜರಗಲಿದೆ.
ಸಂಜೆ 7 ರಿಂದ ಸಭಾ ಕಾರ್ಯಕ್ರಮ ಜರಗಲಿದ್ದು .ಹಿರಿಯ ಯಕ್ಷಗಾನ ವಿದ್ವಾಂಸ,ವಿಮರ್ಶಕ ಡಾ| ಎಂ ಪ್ರಭಾಕರ ಜೋಷಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ತುಳು ಸಂಘ ಬರೋಡಾದ ಅಧ್ಯಕ್ಷ ಶಶಿಧರ್ ಶೆಟ್ಟಿ, ಮೇಯರ್ ಜಯಾನಂದ ಅಂಚನ್, ಎಸ್.ಸಿ.ಡಿ.ಸಿ.ಸಿ ಬ್ಯಾಂಕ್‌ನ ನಿರ್ದೇಶಕ ಟಿ.ಜಿ.ರಾಜಾರಾಮ್ ಭಟ್,ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್, ಉದ್ಯಮಿ ಚಂದ್ರಶೇಖರ ಮಾಡ ಕುದ್ರಾಡಿಗುತ್ತು ಭಾಗವಹಿಸಲಿದ್ದಾರೆ.
ಹಿರಿಯ ಯಕ್ಷಗಾನ ಕಲಾವಿದ ಕೋಡಿ ಕೃಷ್ಣ( ಕುಷ್ಟ)ಗಾಣಿಗ ಅವರಿಗೆ ಭ್ರಾಮರೀ ಯಕ್ಷಮಣಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಭ್ರಾಮರೀ ಯಕ್ಷಸೇವಾಪುರಸ್ಕಾರವನ್ನು ಶ್ರೀ ವಾಗೀಶ್ವರೀ ಯಕ್ಷಗಾನ ಕಲಾವರ್ಧಕ ಸಂಘ ಮಂಗಳೂರು ಹಾಗೂ ಕಟೀಲು ಮೇಳದ ನೇಪಥ್ಯ ಕಲಾವಿದ ವಿಠಲ ಶೆಟ್ಟಿ ಅವರಿಗೆ ನೀಡಿ ಗೌರವಿಸಲಾಗುವುದು. ರಾತ್ರಿ 9 ರಿಂದ ಚೆಂಡೆ ಜುಗಲ್‌ಬಂದಿ, ನಾಡಿನ ಹೆಸರಾಂತ ಕಲಾವಿದರ ಕೂಡುವಿಕೆಯಲ್ಲಿ ಶರಣ ಸೇವಾರತ್ನ,ರಾಣಿ ಶಶಿಪ್ರಭೆ,ಶ್ರೀ ದೇವಿ ಕೌಶಿಕೆ ಎಂಬ ಯಕ್ಷಗಾನ ಜರಗಲಿದ್ದು.ಈ ಎಲ್ಲಾ ಕಾರ್ಯಕ್ರಮಕ್ಕೆ ಉಚಿತ ಪ್ರವೇಶ ಇರುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು