10:52 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಆಗಸ್ಟ್‌ 12ರಂದು ಮಂಗಳೂರು ಪುರಭವನದಲ್ಲಿ ಭ್ರಾಮರೀ ಯಕ್ಷವೈಭವ: ಕೃಷ್ಣ ಗಾಣಿಗರಿಗೆ ಯಕ್ಷಮಣಿ ಪ್ರಶಸ್ತಿ

08/08/2023, 12:04

ಮಂಗಳೂರು(reporterkarnataka.com) :ಭ್ರಾಮರೀ ಯಕ್ಷಮಿತ್ರರು ಮಂಗಳೂರು ಟ್ರಸ್ಟ್ ಆಶ್ರಯದಲ್ಲಿ ಆಗಸ್ಟ್ 12 ಶನಿವಾರದಂದು ಸಂಜೆ 7 ರಿಂದ ಮರುದಿನ ಮುಂಜಾನೆಯವರೆಗೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಆರನೇ ವರ್ಷದ ಭ್ರಾಮರೀ ಯಕ್ಷವೈಭವ – 2023 ಜರಗಲಿದೆ.
ಸಂಜೆ 7 ರಿಂದ ಸಭಾ ಕಾರ್ಯಕ್ರಮ ಜರಗಲಿದ್ದು .ಹಿರಿಯ ಯಕ್ಷಗಾನ ವಿದ್ವಾಂಸ,ವಿಮರ್ಶಕ ಡಾ| ಎಂ ಪ್ರಭಾಕರ ಜೋಷಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ತುಳು ಸಂಘ ಬರೋಡಾದ ಅಧ್ಯಕ್ಷ ಶಶಿಧರ್ ಶೆಟ್ಟಿ, ಮೇಯರ್ ಜಯಾನಂದ ಅಂಚನ್, ಎಸ್.ಸಿ.ಡಿ.ಸಿ.ಸಿ ಬ್ಯಾಂಕ್‌ನ ನಿರ್ದೇಶಕ ಟಿ.ಜಿ.ರಾಜಾರಾಮ್ ಭಟ್,ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್, ಉದ್ಯಮಿ ಚಂದ್ರಶೇಖರ ಮಾಡ ಕುದ್ರಾಡಿಗುತ್ತು ಭಾಗವಹಿಸಲಿದ್ದಾರೆ.
ಹಿರಿಯ ಯಕ್ಷಗಾನ ಕಲಾವಿದ ಕೋಡಿ ಕೃಷ್ಣ( ಕುಷ್ಟ)ಗಾಣಿಗ ಅವರಿಗೆ ಭ್ರಾಮರೀ ಯಕ್ಷಮಣಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಭ್ರಾಮರೀ ಯಕ್ಷಸೇವಾಪುರಸ್ಕಾರವನ್ನು ಶ್ರೀ ವಾಗೀಶ್ವರೀ ಯಕ್ಷಗಾನ ಕಲಾವರ್ಧಕ ಸಂಘ ಮಂಗಳೂರು ಹಾಗೂ ಕಟೀಲು ಮೇಳದ ನೇಪಥ್ಯ ಕಲಾವಿದ ವಿಠಲ ಶೆಟ್ಟಿ ಅವರಿಗೆ ನೀಡಿ ಗೌರವಿಸಲಾಗುವುದು. ರಾತ್ರಿ 9 ರಿಂದ ಚೆಂಡೆ ಜುಗಲ್‌ಬಂದಿ, ನಾಡಿನ ಹೆಸರಾಂತ ಕಲಾವಿದರ ಕೂಡುವಿಕೆಯಲ್ಲಿ ಶರಣ ಸೇವಾರತ್ನ,ರಾಣಿ ಶಶಿಪ್ರಭೆ,ಶ್ರೀ ದೇವಿ ಕೌಶಿಕೆ ಎಂಬ ಯಕ್ಷಗಾನ ಜರಗಲಿದ್ದು.ಈ ಎಲ್ಲಾ ಕಾರ್ಯಕ್ರಮಕ್ಕೆ ಉಚಿತ ಪ್ರವೇಶ ಇರುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು