6:34 AM Thursday2 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಆ.23ರಿಂದ ರಾಜ್ಯದಲ್ಲಿ ವ್ಯಾಪಕ ಮಳೆ ಸಾಧ್ಯತೆ : ಹವಾಮಾನ ಇಲಾಖೆಯಿಂದ ಮುನ್ಸೂಚನೆ

18/08/2022, 10:15

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಕೆಲವು ದಿನಗಳಿಂದ ತಗ್ಗಿದ್ದ ಮಳೆಯ ಆರ್ಭಟ ಆ.23ರಿಂದ ಮತ್ತೆ ಚುರುಕಾಗಲಿದೆ. ಕರಾವಳಿ ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮಲೆನಾಡು ಹಾಗೂ ರಾಜ್ಯದ ಒಳನಾಡಿನಲ್ಲಿ ಆಗಸ್ಟ್ ಮೊದಲ ವಾರದಲ್ಲಿ ಎಡೆಬಿಡದೆ ಮಳೆ ಸುರಿದು ಜನಜೀವನ ಅಸ್ತವ್ಯಸ್ಥಗೊಂಡಿತ್ತು. ಹಲವೆಡೆ ಭೂಕುಸಿತ, ಸಂಚಾರ ಕಡಿತ, ಮನೆ ಕುಸಿತ, ಜೀವಹಾನಿ, ಬೆಳೆ ನಷ್ಟ ಸಂಭವಿಸಿತ್ತು.

ನದಿ ಪಾತ್ರದಲ್ಲಿ ಪ್ರವಾಹ ಪರಿಸ್ಥಿತಿಯು ಉಂಟಾಗಿ ಜನರು ತತ್ತರಿಸುವಂತಾಗಿತ್ತು. ಆ.12ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದ್ದು, ಮಲೆನಾಡು, ಕರಾವಳಿ ಸೇರಿ ರಾಜ್ಯದ ಒಳನಾಡಿನಲ್ಲೂ ಮಳೆ ಸದ್ಯಕ್ಕೆ ಬಿಡುವು ಕೊಟ್ಟಿದೆ.

ಆ.23ರಿಂದ ರಾಜ್ಯದಲ್ಲಿ ಒಂದು ವಾರ ಕಾಲ ಉತ್ತಮ ಮಳೆಯಾಗುವ ಲಕ್ಷಣಗಳು ಕಂಡುಬರುತ್ತಿವೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸಂಸ್ಥಾಪಕ ಹಾಗೂ ನಿವೃತ್ತ ವಿಶೇಷ ನಿರ್ದೇಶಕ ವಿ.ಎಸ್.ಪ್ರಕಾಶ್ ತಿಳಿಸಿದ್ದಾರೆ. ಕಳೆದ ಒಂದು ವಾರದಿಂದ ಬಿಡುವು ನೀಡಿರುವ ಮಳೆ ಇನ್ನು ಒಂದು ವಾರ ಮುಂದುವರೆಯಲಿದ್ದು, ಒಣ ಹವೆ ಇರಲಿದೆ. ಮತ್ತೆ ಮಳೆ ಬರುವುದರಿಂದ ಕೃಷಿಗೆ ಅನುಕೂಲಕರವಾಗಲಿದೆ ಎಂದು ಅವರು ತಿಳಿಸಿದರು.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ, 2022ರ ಜೂನ್‍ನಿಂದ ಈವರೆಗೆ ರಾಜ್ಯದಲ್ಲಿ ವಾಡಿಕೆಗಿಂತ ಶೇ.23ರಷ್ಟು ಅಧಿಕ ಮಳೆಯಾಗಿದೆ. ಈ ಅವಧಿಯಲ್ಲಿ 594 ಮಿ.ಮೀ ವಾಡಿಕೆ ಮಳೆಯಾಗಿದ್ದು, 731 ಮಿ.ಮೀನಷ್ಟು ಮಳೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ ಶೇ.120, ಉತ್ತರ ಒಳನಾಡಿನಲ್ಲಿ ಶೇ.33, ಮಲೆನಾಡಿನಲ್ಲಿ ಶೇ.16ರಷ್ಟು ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಆದರೆ ಕರಾವಳಿ ಭಾಗದಲ್ಲಿ ಮಾತ್ರ ವಾಡಿಕೆ ಪ್ರಮಾಣದ ಮಳೆಯಾಗಿದೆ.

ಆ.1ರಿಂದ ಇಲ್ಲಿಯವರೆಗೆ ರಾಜ್ಯದಲ್ಲಿ 192 ಮಿ.ಮೀನಷ್ಟು ಮಳೆಯಾಗಿದ್ದು, ವಾಡಿಕೆಗಿಂತ ಶೇ.55ರಷ್ಟು ಅಧಿಕ ಮಳೆಯಾಗಿದೆ. ಈ ಅವಧಿಯಲ್ಲಿ ರಾಜ್ಯದ ವಾಡಿಕೆ ಮಳೆ ಪ್ರಮಾಣ 124 ಮಿ.ಮೀ. ದಕ್ಷಿಣ ಒಳನಾಡಿನಲ್ಲಿ 39 ಮಿ.ಮೀ ವಾಡಿಕೆ ಮಳೆಯಾಗಿದ್ದು, 137 ಮಿ.ಮೀ ಮಳೆಯಾಗುವ ಮೂಲಕ ವಾಡಿಕೆಗಿಂತ ಶೇ.253ರಷ್ಟು ಅತ್ಯಧಿಕ ಮಳೆಯಾಗಿದೆ.

ಅದೇ ರೀತಿ ಉತ್ತರ ಒಳನಾಡಿನಲ್ಲಿ ವಾಡಿಕೆಯ 62 ಮಿ.ಮೀಗೆ 96 ಮಿ.ಮೀನಷ್ಟು ಮಳೆಯಾಗಿದ್ದು, ಶೇ.55ರಷ್ಟು ಹೆಚ್ಚು ಮಳೆಯಾಗಿದೆ. ಮಲೆನಾಡು ಭಾಗದಲ್ಲಿ 254 ಮಿ.ಮೀ ವಾಡಿಕೆ ಮಳೆಯಾಗಿದ್ದು, 405 ಮಿ.ಮೀನಷ್ಟು ಮಳೆಯಾಗಿದ್ದು, ವಾಡಿಕೆಗಿಂತ ಶೇ.59ರಷ್ಟು ಅಧಿಕ ಮಳೆಯಾಗಿದ್ದರೆ, ಕರಾವಳಿ ಭಾಗದಲ್ಲಿ 489 ಮಿ.ಮೀ ವಾಡಿಕೆ ಮಳೆಯಾಗಿದ್ದು, 517 ಮಿ.ಮೀನಷ್ಟು ಮಳೆಯಾಗಿದೆ. ವಾಡಿಕೆಗಿಂತ ಶೇ.6ರಷ್ಟು ಮಾತ್ರ ಹೆಚ್ಚು ಮಳೆಯಾದಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು