10:25 PM Saturday22 - November 2025
ಬ್ರೇಕಿಂಗ್ ನ್ಯೂಸ್
ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ… ಮೆಕ್ಕೆಜೋಳ ಖರೀದಿ-ಆಮದು ಬಗ್ಗೆ ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ ಸಿಎಂ: ಕೇಂದ್ರ ಸಚಿವ… ರಾಜ್ಯಕ್ಕೆ ಯಾರು ಮುಖ್ಯಮಂತ್ರಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಸ್ಪಷ್ಟವಾಗಿ ತಿಳಿಸಲಿ: ಪ್ರತಿಪಕ್ಷ ನಾಯಕ… ಕೇರಳದಿಂದ ಮಡಿಕೇರಿಗೆ ಅಕ್ರಮ ಕೆಂಪು ಕಲ್ಲು ಸಾಗಾಟ: ಸುಳ್ಯ ಪೊಲೀಸರಿಂದ ಲಾರಿ ವಶ ಡಿಕೆಶಿ ಮುಖ್ಯಮಂತ್ರಿ ಆಗಲಿ ಎಂದು 91 ಕೆಜಿ ಎಳ್ಳಿನ ತುಲಾಭಾರ: ಪಾವಗಡದಲ್ಲಿ ಅಭಿಮಾನಿಗಳ… ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ…

ಇತ್ತೀಚಿನ ಸುದ್ದಿ

ಅ.27- 29: ಮುಕ್ಕ ಶ್ರೀನಿವಾಸ ವಿಶ್ವವಿದ್ಯಾಲಯ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿ ಕಾಲೇಜಿನಲ್ಲಿ ‘ಕೋಡ್ ಮೀಟ್-2023’

26/10/2023, 16:35

ಮಂಗಳೂರು(reporterkarnataka.com): ಮುಕ್ಕ ಶ್ರೀನಿವಾಸ ವಿಶ್ವವಿದ್ಯಾಲಯ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿ ಕಾಲೇಜಿನಲ್ಲಿ ಅ.೨೭ ರಿಂದ ೨೯ ರವರೆಗೆ ‘ಕೋಡ್ ಮೀಟ್-೨೦೨೩’ ಕಾರ್ಯಕ್ರಮವನ್ನು ಆಚರಿಸಲಾಗುವುದು ಎಂದು ಶ್ರೀನಿವಾಸ ವಿಶ್ವವಿದ್ಯಾಲಯದ ರಿಜಿಸ್ಟಾರ್ ಡಾ. ಅನಿಲ್ ಕುಮಾರ್ ಹೇಳಿದರು.
ಅವರು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅ.೨೭ ರಂದು ಬೆಳಿಗ್ಗೆ ೧೧ ಗಂಟೆಗೆ ಮುಕ್ಕ ಶ್ರೀನಿವಾಸ ವಿಶ್ವವಿದ್ಯಾಲಯದ ಓಪನ್ ಏರ್ ಅಡಿಟೋರಿಯಂನಲ್ಲಿ ಉದ್ಘಾಟಿಸಲಾಗುವುದು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀನಿವಾಸ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ. ಸಿ.ಎ. ಎ. ರಾಘವೇಂದ್ರ ರಾವ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶ್ರೀನಿವಾಸ ವಿಶ್ವವಿದ್ಯಾಲಯದ ಸಹಕುಲಾಧಿಪತಿ ಮತ್ತು ಎ ಶಾಮರಾವ್ ಪ್ರತಿಷ್ಠಾನದ ಉಪಾಧ್ಯಕ್ಷ ಡಾ. ಎ. ಶ್ರೀನಿವಾಸ್ ರಾವ್, ಇನ್ಫೋಸಿಸ್ ವ್ಯವಸ್ಥಾಪಕ ರೋಹಿತ್ ಪೈ, ಶ್ರೀನಿವಾಸ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ಸದಸ್ಯರಾದ ಎ. ವಿಜಯಲಕ್ಷ್ಮೀ ಆರ್. ರಾವ್, ಪ್ರೊ. ಎ. ಮಿತ್ರ ಎಸ್. ರಾವ್ ಭಾಗವಹಿಸಲಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ೩೫೦ಕ್ಕೂ ಹೆಚ್ಚಿನವರು ಭಾಗವಹಿಸಲಿದ್ದು, ಮೂರು ವಿಭಾಗಗಳಾಗಿ ವಿಂಗಡಿಸಿದ್ದು, ಪ್ರಥಮ, ದ್ವಿತೀಯ ಹಾಗೂ ಮೂರನೇ ಬಹುಮಾನವನ್ನು ವಿತರಿಸಲಾಗುವುದು. ಒಟ್ಟು ೧ ಲಕ್ಷ ರೂ.ದ ಬಹುಮಾನವನ್ನು ವಿತರಿಸಲು ತಿರ್ಮಾನಿಸಿದ್ದು, ೯ ಜನರಿಗೆ ಹಂಚಲಾಗುವುದು, ಇದರೊಂದಿಗೆ ಅವರಿಗೆ ಉಪಯುಕ್ತವಾಗುವಂತಹ ಆಕರ್ಶಕ ಕೂಪನ್‌ಗಳನ್ನು ಕೂಡ ನೀಡಲಾಗುವುದು ಎಂದು ಹೇಳಿದರು.



ಶ್ರೀನಿವಾಸ ವಿಶ್ವವಿದ್ಯಾಲಯದ ಎಸ್.ಯು.ಐ.ಇ.ಟಿ ಡೀನ್ ಡಾ. ಥಾಮಸ್ ಪಿಂಟೋ, ವಿಶ್ವವಿದ್ಯಾಲಯದ ವೆಬ್‌ಫ್ಲೋ ಕಮ್ಯೂನಿಟಿ ಮಾರ್ಗದರ್ಶಕಿ ಡಾ. ಸುಷ್ಮಾ ಅಕ್ಕರಾಜು, ಪ್ರೊಫೆಸರ್ ಡಾ. ರಂಜಿತ್ ಕೋಲ್ಕಡ, ವಿದ್ಯಾರ್ಥಿಗಳಾದ ಸಿದ್ದಾರ್ಥ್, ಅಬ್ರಾಬ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು