2:35 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಅ.27- 29: ಮುಕ್ಕ ಶ್ರೀನಿವಾಸ ವಿಶ್ವವಿದ್ಯಾಲಯ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿ ಕಾಲೇಜಿನಲ್ಲಿ ‘ಕೋಡ್ ಮೀಟ್-2023’

26/10/2023, 16:35

ಮಂಗಳೂರು(reporterkarnataka.com): ಮುಕ್ಕ ಶ್ರೀನಿವಾಸ ವಿಶ್ವವಿದ್ಯಾಲಯ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿ ಕಾಲೇಜಿನಲ್ಲಿ ಅ.೨೭ ರಿಂದ ೨೯ ರವರೆಗೆ ‘ಕೋಡ್ ಮೀಟ್-೨೦೨೩’ ಕಾರ್ಯಕ್ರಮವನ್ನು ಆಚರಿಸಲಾಗುವುದು ಎಂದು ಶ್ರೀನಿವಾಸ ವಿಶ್ವವಿದ್ಯಾಲಯದ ರಿಜಿಸ್ಟಾರ್ ಡಾ. ಅನಿಲ್ ಕುಮಾರ್ ಹೇಳಿದರು.
ಅವರು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅ.೨೭ ರಂದು ಬೆಳಿಗ್ಗೆ ೧೧ ಗಂಟೆಗೆ ಮುಕ್ಕ ಶ್ರೀನಿವಾಸ ವಿಶ್ವವಿದ್ಯಾಲಯದ ಓಪನ್ ಏರ್ ಅಡಿಟೋರಿಯಂನಲ್ಲಿ ಉದ್ಘಾಟಿಸಲಾಗುವುದು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀನಿವಾಸ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ. ಸಿ.ಎ. ಎ. ರಾಘವೇಂದ್ರ ರಾವ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶ್ರೀನಿವಾಸ ವಿಶ್ವವಿದ್ಯಾಲಯದ ಸಹಕುಲಾಧಿಪತಿ ಮತ್ತು ಎ ಶಾಮರಾವ್ ಪ್ರತಿಷ್ಠಾನದ ಉಪಾಧ್ಯಕ್ಷ ಡಾ. ಎ. ಶ್ರೀನಿವಾಸ್ ರಾವ್, ಇನ್ಫೋಸಿಸ್ ವ್ಯವಸ್ಥಾಪಕ ರೋಹಿತ್ ಪೈ, ಶ್ರೀನಿವಾಸ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ಸದಸ್ಯರಾದ ಎ. ವಿಜಯಲಕ್ಷ್ಮೀ ಆರ್. ರಾವ್, ಪ್ರೊ. ಎ. ಮಿತ್ರ ಎಸ್. ರಾವ್ ಭಾಗವಹಿಸಲಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ೩೫೦ಕ್ಕೂ ಹೆಚ್ಚಿನವರು ಭಾಗವಹಿಸಲಿದ್ದು, ಮೂರು ವಿಭಾಗಗಳಾಗಿ ವಿಂಗಡಿಸಿದ್ದು, ಪ್ರಥಮ, ದ್ವಿತೀಯ ಹಾಗೂ ಮೂರನೇ ಬಹುಮಾನವನ್ನು ವಿತರಿಸಲಾಗುವುದು. ಒಟ್ಟು ೧ ಲಕ್ಷ ರೂ.ದ ಬಹುಮಾನವನ್ನು ವಿತರಿಸಲು ತಿರ್ಮಾನಿಸಿದ್ದು, ೯ ಜನರಿಗೆ ಹಂಚಲಾಗುವುದು, ಇದರೊಂದಿಗೆ ಅವರಿಗೆ ಉಪಯುಕ್ತವಾಗುವಂತಹ ಆಕರ್ಶಕ ಕೂಪನ್‌ಗಳನ್ನು ಕೂಡ ನೀಡಲಾಗುವುದು ಎಂದು ಹೇಳಿದರು.



ಶ್ರೀನಿವಾಸ ವಿಶ್ವವಿದ್ಯಾಲಯದ ಎಸ್.ಯು.ಐ.ಇ.ಟಿ ಡೀನ್ ಡಾ. ಥಾಮಸ್ ಪಿಂಟೋ, ವಿಶ್ವವಿದ್ಯಾಲಯದ ವೆಬ್‌ಫ್ಲೋ ಕಮ್ಯೂನಿಟಿ ಮಾರ್ಗದರ್ಶಕಿ ಡಾ. ಸುಷ್ಮಾ ಅಕ್ಕರಾಜು, ಪ್ರೊಫೆಸರ್ ಡಾ. ರಂಜಿತ್ ಕೋಲ್ಕಡ, ವಿದ್ಯಾರ್ಥಿಗಳಾದ ಸಿದ್ದಾರ್ಥ್, ಅಬ್ರಾಬ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು