7:16 PM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಅ. 27: ಪಾಲ್ದನೆ ರಾಫಯಲ್ ಮೇರಿ ಕಾನ್ವೆಂಟ್‌ನಲ್ಲಿ ಉಚಿತ ಕ್ಯಾನ್ಸರ್ ತಪಾಸಣೆ ಮತ್ತು ಮಾಹಿತಿ ನೀಡುವ ಶಿಬಿರ

14/10/2024, 11:21

ಮಂಗಳೂರು(reporterkarnataka.com): ಪಾಲ್ದನೆಯಲ್ಲಿರುವ ಸಂತ ರಾಪಾಯೆಲ್ ಮೇರಿ ಕಾನ್ವೆಂಟ್ ಹಾಗೂ ಸಂತ ತೆರೆಜಾ ಚರ್ಚು ಇದರ ಜಂಟಿ ಸಹಭಾಗಿತ್ವದಲ್ಲಿ ಹಾಗೂ ಜ್ಯುವೆಲ್ಸ್ ಗ್ರೂಪ್ ಇದರ ನೇತೃತ್ವದಲ್ಲಿ ಪರಿಸರದ ಜನರಿಗಾಗಿ ಫಾದರ್ ಮುಲ್ಲರ್ಸ್ ಮೆಡಿಕಲ್ ಕಾಲೇಜು ಮಂಗಳೂರು ಇದರ ನುರಿತ ವೈದ್ಯರ ಮಾರ್ಗದರ್ಶನದಲ್ಲಿ ಇಂಡಿಯನ್ ಕ್ಯಾನ್ಸರ್ ಸೊಸೈಟಿ ಇದರ ಸಹಯೋಗದೊಂದಿಗೆ “ಉಚಿತ ಕ್ಯಾನ್ಸರ್ ತಪಾಸಣೆ ಮತ್ತು ಮಾಹಿತಿ ನೀಡುವ ಶಿಬಿರ”
ಅಕ್ಟೋಬರ್ 27ರ ಭಾನುವಾರ ಬೆಳಿಗ್ಗೆ ಗಂಟೆ 8.00 ರಿಂದ ಮಧ್ಯಾಹ್ನ ಗಂಟೆ 1 ರ ತನಕ ಪಾಲ್ದನೆ ಸಂತ ತೆರೆಜಾ ಚರ್ಚಿನ ಬಳಿ ಇರುವ ಸಂತ ರಾಫಯಲ್ ಮೇರಿ ಕಾನ್ವೆಂಟ್‌ನಲ್ಲಿ ನಡೆಯಲಿದೆ.
ಶಿಬಿರದಲ್ಲಿ ಸ್ತನದ ಕ್ಯಾನ್ಸರ್, ಮುಟ್ಟಿನ ಸಮಸ್ಯೆ,ಗುಣವಾಗದ ಹುಣ್ಣು, ಅಜೀರ್ಣ, ರಕ್ತ ಹೀನತೆ, ಮೂಳೆ ನೋವು, ರಕ್ತ ಸ್ರಾವ ಮುಂತಾದ ಸಮಸ್ಯೆಗಳ ಕಾರಣ ಹುಡುಕುವುದು ಹಾಗೂ ಸ್ತಿçÃಯರ ಆರೋಗ್ಯ ಮತ್ತು ಪುರುಷರ ಆರೋಗ್ಯ ತಪಾಸಣೆ ಪ್ರತ್ಯೇಕವಾಗಿ ನಡೆಸಿ ತಜ್ಞರಿಂದ ಜಾಗೃತಿಯನ್ನು ನೀಡುವುದು ಮುಂತಾದುವುಗಳು ಲಭ್ಯವಾಗಲಿದೆ ಎಂದು ಆಯೋಜಕರು ತಿಳಿಸಿದ್ದಾರೆ. ಇದರ ಸದುಪಯೋಗ ಪಡೆಯಲು ಸಾರ್ವಜನಿಕರಿಗೆ ಕೋರಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು