10:44 PM Saturday31 - January 2026
ಬ್ರೇಕಿಂಗ್ ನ್ಯೂಸ್
ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಆಗಸ್ಟ್ 27ರಂದು ಭ್ರಾಮರೀ ಯಕ್ಷವೈಭವ 2022;  ಭ್ರಾಮರೀ ಯಕ್ಷಸೇವಾ ಪುರಸ್ಕಾರ

19/08/2022, 12:40

ಮಂಗಳೂರು(reporterkarnataka.com): ಭ್ರಾಮರೀ ಯಕ್ಷಮಿತ್ರರು ಮಂಗಳೂರು ಇದರ 5ನೇ ವರ್ಷದ ಭ್ರಾಮರೀ ಯಕ್ಷವೈಭವ 2022 ಆಗಸ್ಟ್ 27ರಂದು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಸಂಜೆ 7 ರಿಂದ ಮರುದಿನ ಮುಂಜಾನೆಯವರೆಗೆ ಜರಗಲಿದೆ.

ಯಕ್ಷಗಾನದ ಹಿರಿಯ ಹಾಸ್ಯಕಲಾವಿದ ಪೆರುವಡಿ ನಾರಾಯಣ ಭಟ್ಟರಿಗೆ ಭ್ರಾಮರೀ ಯಕ್ಷಮಣಿ ಪ್ರಶಸ್ತಿ , ನೇಪಥ್ಯ ಕಲಾವಿದರಾದ ಗೋಪಾಲ ಪೂಜಾರಿ ಹಾಗೂ ಬೊಕ್ಕಸ ಜಗನ್ನಾಥ ರಾವ್ ಅವರಿಗೆ ಭ್ರಾಮರೀ ಯಕ್ಷಸೇವಾ ಪುರಸ್ಕಾರ ನೀಡಿ ಈ ಸಂದರ್ಭದಲ್ಲಿ ಗೌರವಿಸಲಾಗುವುದು.

ಹಿರಿಯ ಯಕ್ಷಗಾನ ಪ್ರಸಂಗಕರ್ತ ಪೊಳಲಿ ನಿತ್ಯಾನಂದ ಕಾರಂತ ಅಧ್ಯಕ್ಷತೆ ವಹಿಸಲಿದ್ದು, ಮಂಗಳೂರು ಉತ್ತರ ಶಾಸಕ ಡಾ.ವೈ.ಭರತ್ ಶೆಟ್ಟಿ, ಮೇಯರ್ ಪ್ರೇಮಾನಂದ ಶೆಟ್ಟಿ. ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ಟಿ.ಜಿ.ರಾಜಾರಾಮ್ ಭಟ್, ಧಾರ್ಮಿಕ ಪರಿಷತ್ ಸದಸ್ಯ ನಿಡ್ಡೋಡಿ ಚಾವಡಿಮನೆ ಜಗನ್ನಾಥ ಶೆಟ್ಟಿ,ಮಂಗಳೂರು ಗಣೇಶೋತ್ಸವದ ಅಧ್ಯಕ್ಷ ಶಶಿಕಾಂತ್ ನಾಗ್ವೇಕರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ದಿವಂಗತ ಬಲಿಪ ಪ್ರಸಾದ ಭಟ್ ಅವರ ಸಂಸ್ಮರಣೆ, ಯಕ್ಷಗಾನ ಪೂರ್ವರಂಗ, ಚೆಂಡೆ ಜುಗಲ್ ಬಂಧಿ, ಪ್ರಸಿದ್ದ ಕಲಾವಿದರ ಕೂಡುವಿಕೆಯಲ್ಲಿ ದಮಯಂತಿ ಪುನಃ ಸ್ವಯಂವರ, ಮಾಯಾತಿಲೋತ್ತಮೆ, ವೀರವರ್ಮ ಕಾಳಗ ಯಕ್ಷಗಾನದ ಪ್ರದರ್ಶನ ಜರಗಲಿದೆ. ಈ ಎಲ್ಲಾ ಕಾರ್ಯಕ್ರಮಗಳಿಗೂ ಉಚಿತ ಪ್ರವೇಶ ಇರುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು