6:46 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಅಗಸ್ಟ್‌ 27ರ ವರೆಗೆ ಉತ್ತರ, ಈಶಾನ್ಯ ಭಾರತದಲ್ಲಿ ಭಾರಿ ಮಳೆ ನಿರೀಕ್ಷೆ: ಹವಾಮಾನ ಇಲಾಖೆ

24/08/2021, 09:52

ನವದೆಹಲಿ(reporterkarnataka.com) : ಮುಂದಿನ ಮೂರು ದಿನಗಳ ಕಾಲ ಕರ್ನಾಟಕ ಸೇರಿದಂತೆ ಈಶಾನ್ಯ ಭಾರತ, 

ಹಿಮಾಲಯ ಪ್ರಾಂತ್ಯ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಪೂರ್ವ ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ಬಿಹಾರದಲ್ಲಿ ಆ.27ರ ವರೆಗೂ ಬಿರುಸಿನ ಭಾರೀ ಮಳೆಯಾಗಲಿದೆ. ಆಗಸ್ಟ್ 23 ರಿಂದ 25 ರವರೆಗೆ ಅಸ್ಸಾಂ ಮತ್ತು ಮೇಘಾಲಯ, ಅಲ್ಲದೇ ಆಗಸ್ಟ್ 23, 26 ಮತ್ತು 27 ರಂದು ತಮಿಳುನಾಡು, ಕೇರಳ ಮತ್ತು ಮಾಹೆಯಲ್ಲಿ ವ್ಯಾಪಕವಾದ ಮಳೆಯಿಂದಾಗಿ ವ್ಯಾಪಕ ಮಳೆ ಸುರಿಯಲಿದೆ. ಇನ್ನು ರಾಜಸ್ಥಾನದಲ್ಲಿ ಅಗಸ್ಟ್‌ 27ರ ವರಗೆ ಮಳೆಯಾಗಲಿದೆ ಎಂದು ಹೇಳಿದೆ.

ಕಳೆದ ಕೆಲವು ದಿನಗಳಿಂದಲೂ ಕರ್ನಾಟಕ ಕೆಲವು ಕಡೆಗಳಲ್ಲಿ ಮಳೆಯಾಗುತ್ತಿದೆ. ಅಲ್ಲದೇ ಇನ್ನೆರಡು ದಿನಗಳ ಕಾಲ ಮಳೆ ಮುಂದುವರಿಯಲಿದೆ. ಅದ್ರಲ್ಲೂ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು