5:55 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಅ. 27: ಸಿಪಿಎಂ ಮಂಗಳೂರು ನಗರ ದಕ್ಷಿಣ ಸಮ್ಮೇಳನ; ಸಂಜೆ ಬಹಿರಂಗ ಸಭೆ

25/10/2024, 10:59

ಮಂಗಳೂರು(reporterkarnataka.com): ಸಿಪಿಎಂ ಮಂಗಳೂರು ನಗರ ದಕ್ಷಿಣ ಸಮ್ಮೇಳನ ಅಕ್ಟೋಬರ್ 27 ರಂದು ನಗರದ ಕೊಟ್ಟಾರ ಚೌಕಿಯ ವಿ.ಎಸ್.ಕೆ. ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಸಿಪಿಎಂ ಪಕ್ಷದ 24ನೇ ಅಖಿಲ ಭಾರತ ಮಹಾ ಅಧಿವೇಶನ 2025 ಎಪ್ರಿಲ್ ನಲ್ಲಿ ಮಧುರೈ ನಲ್ಲಿ ಆರು ದಿನಗಳ ಕಾಲ ನಡೆಯಲಿದೆ. ಅದರ ಪೂರ್ವ ಭಾವಿಯಾಗಿ ಎಲ್ಲ ಹಂತಗಳ ಸಮ್ಮೇಳನಗಳು ದೇಶಾದ್ಯಂತ ಆರಂಭಗೊಂಡಿವೆ. ದ.ಕ. ಜಿಲ್ಲೆಯಲ್ಲಿಯೂ ಸಮ್ಮೇಳನದ ಪ್ರಕ್ರಿಯೆಗಳು ಆರಂಭಗೊಂಡಿದೆ. ಮಂಗಳೂರು ನಗರ ದಕ್ಷಿಣ ಸಮ್ಮೇಳನವು ಉರ್ವಸ್ಟೋರಿನಲ್ಲಿ ಕಾಮ್ರೇಡ್ ಸೀತಾರಾಮ್ ಯೆಚೂರಿ ವೇದಿಕೆ, ಕಾಮ್ರೇಡ್ ಕೊರಗಪ್ಪ ಶೆಟ್ಟಿ ಸಭಾಂಗಣ ಹಾಗೂ ಕಾಂ ಜೆರಿ ಪತ್ರಾವೋ ನಗರದಲ್ಲಿ ಹಮ್ಮಿಕೊಳ್ಳಲಾಗಿದೆ. ಅಕ್ಟೋಬರ್ 27 ರಂದು ಬೆಳಿಗ್ಗೆ 9:30ಕ್ಕೆ ಧ್ವಜಾರೋಹಣದೊಂದಿಗೆ ಸಮ್ಮೇಳನಕ್ಕೆ ಚಾಲನೆ ದೊರೆಯಲಿದೆ. ಸಿಪಿಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಕೆ ಯಾದವ ಶೆಟ್ಟಿ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರುಗಳಾದ ಜೆ ಬಾಲಕೃಷ್ಣಶೆಟ್ಟಿ, ಪದ್ಮಾವತಿ ಶೆಟ್ಟಿ, ಸುನೀಲ್ ಕುಮಾರ್ ಬಜಾಲ್ ಮಾರ್ಗದರ್ಶಕರಾಗಿ ಉಪಸ್ಥಿತರಿರುತ್ತಾರೆ. ಆ ನಂತರ ಸಮ್ಮೇಳನದ ಪ್ರತಿನಿಧಿ ಕಲಾಪಗಳು ನಡೆಯಲಿವೆ .ಅದೇ ದಿನ ಸಂಜೆ 4 ಗಂಟೆಗೆ ಸಭಾಂಗಣದ ವಠಾರದಿಂದ ಉರ್ವಸ್ಟೋರ್ ಜಂಕ್ಷನ್ ವರೆಗೆ ಆಕರ್ಷಕ ಮೆರವಣೆಗೆ ಹಾಗೂ ಕಾಂ ಚಂದು ಭಂಡಾರಿ ವೇದಿಕೆ, ಕಾಂ ಸುಂದರ ಸಾಲ್ಯಾನ್ ನಗರದಲ್ಲಿ ಬಹಿರಂಗ ಸಭೆ ನಡೆಯಲಿದೆ. ಈ ಬಹಿರಂಗ ಸಭೆಗೆ ಪ್ರಮುಖ ಭಾಷಣಗಾರರಾಗಿ ಸಿಪಿಐಎಂ ಪಕ್ಷದ ಕರ್ನಾಟಕ ರಾಜ್ಯ ಮುಖಂಡರಾದ ಕೆ ಮಹಾಂತೇಶ್ ಭಾಗವಹಿಸಲಿದ್ದಾರೆ ಎಂದು ಸಿಪಿಐಎಂ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸಂತೋಷ್ ಬಜಾಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು