11:40 AM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಅ. 27: ಸಿಪಿಎಂ ಮಂಗಳೂರು ನಗರ ದಕ್ಷಿಣ ಸಮ್ಮೇಳನ; ಸಂಜೆ ಬಹಿರಂಗ ಸಭೆ

25/10/2024, 10:59

ಮಂಗಳೂರು(reporterkarnataka.com): ಸಿಪಿಎಂ ಮಂಗಳೂರು ನಗರ ದಕ್ಷಿಣ ಸಮ್ಮೇಳನ ಅಕ್ಟೋಬರ್ 27 ರಂದು ನಗರದ ಕೊಟ್ಟಾರ ಚೌಕಿಯ ವಿ.ಎಸ್.ಕೆ. ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಸಿಪಿಎಂ ಪಕ್ಷದ 24ನೇ ಅಖಿಲ ಭಾರತ ಮಹಾ ಅಧಿವೇಶನ 2025 ಎಪ್ರಿಲ್ ನಲ್ಲಿ ಮಧುರೈ ನಲ್ಲಿ ಆರು ದಿನಗಳ ಕಾಲ ನಡೆಯಲಿದೆ. ಅದರ ಪೂರ್ವ ಭಾವಿಯಾಗಿ ಎಲ್ಲ ಹಂತಗಳ ಸಮ್ಮೇಳನಗಳು ದೇಶಾದ್ಯಂತ ಆರಂಭಗೊಂಡಿವೆ. ದ.ಕ. ಜಿಲ್ಲೆಯಲ್ಲಿಯೂ ಸಮ್ಮೇಳನದ ಪ್ರಕ್ರಿಯೆಗಳು ಆರಂಭಗೊಂಡಿದೆ. ಮಂಗಳೂರು ನಗರ ದಕ್ಷಿಣ ಸಮ್ಮೇಳನವು ಉರ್ವಸ್ಟೋರಿನಲ್ಲಿ ಕಾಮ್ರೇಡ್ ಸೀತಾರಾಮ್ ಯೆಚೂರಿ ವೇದಿಕೆ, ಕಾಮ್ರೇಡ್ ಕೊರಗಪ್ಪ ಶೆಟ್ಟಿ ಸಭಾಂಗಣ ಹಾಗೂ ಕಾಂ ಜೆರಿ ಪತ್ರಾವೋ ನಗರದಲ್ಲಿ ಹಮ್ಮಿಕೊಳ್ಳಲಾಗಿದೆ. ಅಕ್ಟೋಬರ್ 27 ರಂದು ಬೆಳಿಗ್ಗೆ 9:30ಕ್ಕೆ ಧ್ವಜಾರೋಹಣದೊಂದಿಗೆ ಸಮ್ಮೇಳನಕ್ಕೆ ಚಾಲನೆ ದೊರೆಯಲಿದೆ. ಸಿಪಿಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಕೆ ಯಾದವ ಶೆಟ್ಟಿ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರುಗಳಾದ ಜೆ ಬಾಲಕೃಷ್ಣಶೆಟ್ಟಿ, ಪದ್ಮಾವತಿ ಶೆಟ್ಟಿ, ಸುನೀಲ್ ಕುಮಾರ್ ಬಜಾಲ್ ಮಾರ್ಗದರ್ಶಕರಾಗಿ ಉಪಸ್ಥಿತರಿರುತ್ತಾರೆ. ಆ ನಂತರ ಸಮ್ಮೇಳನದ ಪ್ರತಿನಿಧಿ ಕಲಾಪಗಳು ನಡೆಯಲಿವೆ .ಅದೇ ದಿನ ಸಂಜೆ 4 ಗಂಟೆಗೆ ಸಭಾಂಗಣದ ವಠಾರದಿಂದ ಉರ್ವಸ್ಟೋರ್ ಜಂಕ್ಷನ್ ವರೆಗೆ ಆಕರ್ಷಕ ಮೆರವಣೆಗೆ ಹಾಗೂ ಕಾಂ ಚಂದು ಭಂಡಾರಿ ವೇದಿಕೆ, ಕಾಂ ಸುಂದರ ಸಾಲ್ಯಾನ್ ನಗರದಲ್ಲಿ ಬಹಿರಂಗ ಸಭೆ ನಡೆಯಲಿದೆ. ಈ ಬಹಿರಂಗ ಸಭೆಗೆ ಪ್ರಮುಖ ಭಾಷಣಗಾರರಾಗಿ ಸಿಪಿಐಎಂ ಪಕ್ಷದ ಕರ್ನಾಟಕ ರಾಜ್ಯ ಮುಖಂಡರಾದ ಕೆ ಮಹಾಂತೇಶ್ ಭಾಗವಹಿಸಲಿದ್ದಾರೆ ಎಂದು ಸಿಪಿಐಎಂ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸಂತೋಷ್ ಬಜಾಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು