11:00 AM Monday2 - February 2026
ಬ್ರೇಕಿಂಗ್ ನ್ಯೂಸ್
ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್… ಕೇಂದ್ರ ಬಜೆಟ್ | 2047ರ ವಿಕಸಿತ ಭಾರತಕ್ಕೆ ಸುಧಾರಣಾ ಎಕ್ಸ್‌ಪ್ರೆಸ್ ಎಂದ ಪ್ರಧಾನಿ… ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್…

ಇತ್ತೀಚಿನ ಸುದ್ದಿ

ಅ. 3ರಂದು ಬ್ರಹ್ಮಶ್ರೀ ನಾರಾಯಣ ಗುರು ಹಾಗೂ ಮಂಗಳಾದೇವಿ ಸರ್ಕಲ್ ಉದ್ಘಾಟನೆ: ಶಾಸಕ ವೇದವ್ಯಾಸ ಕಾಮತ್

30/09/2022, 21:12

ಮಂಗಳೂರು(reporterkarnataka.com): ನಗರದ ಪ್ರಮುಖ ಭಾಗಗಳಲ್ಲಿ ನಿರ್ಮಾಣವಾದ ಬ್ರಹ್ಮಶ್ರೀ ನಾರಾಯಣ ಗುರು ಸರ್ಕಲ್ ಹಾಗೂ ಮಂಗಳಾದೇವಿ ಸರ್ಕಲ್ ಸೋಮವಾರ ಉದ್ಘಾಟನೆಯಾಗಲಿದೆ ಎಂದು ಶಾಸಕ ವೇದವ್ಯಾಸ್ ಕಾಮತ್  ತಿಳಿಸಿದ್ದಾರೆ.

ಈ ವಿಚಾರದಲ್ಲಿ ಮಾತನಾಡಿರುವ‌ ಶಾಸಕ ಕಾಮತ್, ಅಕ್ಟೋಬರ್ 3ನೇ ತಾರೀಕು ಸಂಜೆ 6 ಗಂಟೆಗೆ ಲೇಡಿಹಿಲ್ ಶಾಲೆಯ ಬಳಿ ನಿರ್ಮಾಣಗೊಂಡ ನೂತನ ಬ್ರಹ್ಮಶ್ರೀ ನಾರಾಯಣ ಗುರು ಸರ್ಕಲ್ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಸಹಕಾರದಲ್ಲಿ ನಿರ್ಮಾಣಗೊಂಡ ಸರ್ಕಲ್ ಹಿರಿಯರ ಹಾಗೂ ಪ್ರಮುಖರ ಉಪಸ್ಥಿತಿಯಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಹೇಳಿದ್ದಾರೆ.

ಅದೇ ದಿನ ಸಂಜೆ 7 ಗಂಟೆಗೆ ಮಂಗಳಾದೇವಿ ಸರ್ಕಲ್ ಲೋಕಾರ್ಪಣೆಗೊಳ್ಳಲಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಶಾಸಕ ಕಾಮತ್ ಆಮಂತ್ರಿಸಿದ್ದಾರೆ. ಮಂಗಳಾದೇವಿ ವೃತ್ತವನ್ನು ಅತೀ ಸುಂದರವಾಗಿ ನಿರ್ಮಾಣ ಮಾಡಲಾಗಿದೆ. ಈ ವೃತ್ತದಲ್ಲಿ 3 ತಾಮ್ರದ ಸಿಂಹಗಳನ್ನು ಸ್ಥಾಪಿಸಲಾಗಿದೆ. ದೇವಿಯ ವಾಹನದ ಸೂಚಕವಾಗಿ ಸಿಂಹಗಳ ಚಿತ್ರಣವನ್ನು ನೀಡಲಾಗಿದೆ ಎಂದು‌ ಶಾಸಕ ಕಾಮತ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು