9:21 PM Friday30 - January 2026
ಬ್ರೇಕಿಂಗ್ ನ್ಯೂಸ್
ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:…

ಇತ್ತೀಚಿನ ಸುದ್ದಿ

ಆಗಸ್ಟ್ 30: ಕ್ಲಬ್ ಹೌಸ್ ನಲ್ಲಿ ಮೊದಲ ಬಾರಿಗೆ ಹಿಂದೂ ಸಮಾವೇಶ: ಡಾ. ಪ್ರಭಾಕರ್ ಭಟ್ ನೇತೃತ್ವ

27/08/2021, 20:55

ಮಂಗಳೂರು(reporterkarnataka.com) ಟೀಮ್ ಹಿಂದುತ್ವ ಆಶ್ರಯದಲ್ಲಿ  ಕ್ಲಬ್ ಹೌಸ್ ನ ಹಿಂದುತ್ವ ಕ್ಲಬ್ ನಲ್ಲಿ (ಪೇಜ್ ನಲ್ಲಿ) “ಹಿಂದೂ ಸಮಾವೇಶ” ಆಯೋಜಿಸಲಾಗಿದೆ. ಇದೇ ಆಗಸ್ಟ್ 30 ರಂದು ರಾತ್ರಿ 7.30ಕ್ಕೆ ನಡೆಯಲಿದೆ. ಕ್ಲಬ್ ಹೌಸ್ ನಲ್ಲಿ ಇದು ಮೊದಲ ಪ್ರಯತ್ನವಾಗಿದೆ. 

ಕ್ಲಬ್ ಹೌಸ್ ನಲ್ಲಿ ನಡೆಯುವ ಹಿಂದೂ ಸಮಾವೇಶಕ್ಕೆ ಅದೆಷ್ಟು ಕಿವಿಗಳು ಸಾಕ್ಷಿಯಾಗಬಲ್ಲವೋ ಗೊತ್ತಿಲ್ಲ. ಆದರೆ ಕೌತುಕವನ್ನಂತೂ ಇದು  ಸೃಷ್ಟಿ ಮಾಡಿದೆ ಎಂಬ ಮಾತು ಕೇಳಿ ಬರುತ್ತಿದೆ. ಡಾ. ಕಲ್ಲಡ್ಕ ಪ್ರಭಾಕರ ಭಟ್ ನೇತೃತ್ವ ವಹಿಸಲಿದ್ದಾರೆ. ಹಿಂದೂ ಸಮಾಜದ ಏಳಿಗೆ ಮತ್ತು ಏಳು- ಬೀಳು ಹಾಗೂ ಮುಂದಿನ ಭವಿತವ್ಯದ ಕುರಿತು  ಡಾ. ಭಟ್ ಅವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಜತೆಗೆ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಕಾರ್ಯಕ್ರಮದ ನಿರೂಪಣೆಯನ್ನು ಅಂಕಣಕಾರ ರೋಹಿತ್ ಚಕ್ರತೀರ್ಥ ನಡೆಸಿಕೊಡಲಿದ್ದಾರೆ. 

ಗಾಯಕಿ ರಮ್ಯ ವಸಿಷ್ಟ ಅವರಿಂದ ಪ್ರಾರ್ಥನೆ ಮತ್ತು ವಂದೇ ಮಾತರಂ ಗಾಯನ ನಡೆಯಲಿದೆ. ಒಟ್ಟಿನಲ್ಲಿ 30ರಂದು ಕ್ಲಬ್ ಹೌಸಿನ ಹಿಂದೂ ಸಮಾವೇಶ ಹೊಸದೊಂದು ಸಂಚಲನ ಹುಟ್ಟಿಸುವಲ್ಲಿ ದಾಪುಗಾಲಿಡುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು