4:35 PM Wednesday18 - March 2026
ಬ್ರೇಕಿಂಗ್ ನ್ಯೂಸ್
Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ… ಉತ್ತರಿಸದ ಸಚಿವರು: ಇದೇ ಮೊದಲ ಬಾರಿಗೆ ಸ್ಪೀಕರ್ ಸಭಾತ್ಯಾಗ; ಮೂವರು ಅಧಿಕಾರಿಗಳಿಗೆ ತಲೆದಂಡ ರಾಜ್ಯ ಉಪ ಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಏಪ್ರಿಲ್ 9ರಂದು ಮತದಾನ, ಮೇ… ಕಾರಿನ ಮೇಲೆ ಉರುಳಿದ ಕಟ್ಟಿಗೆ ತುಂಬಿದ ಲಾರಿ: ಮಗು ಸಹಿತ ದಂಪತಿ ಪವಾಡಸದೃಶ… ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್…

ಇತ್ತೀಚಿನ ಸುದ್ದಿ

ಆಗಸ್ಟ್ 30: ಕ್ಲಬ್ ಹೌಸ್ ನಲ್ಲಿ ಮೊದಲ ಬಾರಿಗೆ ಹಿಂದೂ ಸಮಾವೇಶ: ಡಾ. ಪ್ರಭಾಕರ್ ಭಟ್ ನೇತೃತ್ವ

27/08/2021, 20:55

ಮಂಗಳೂರು(reporterkarnataka.com) ಟೀಮ್ ಹಿಂದುತ್ವ ಆಶ್ರಯದಲ್ಲಿ  ಕ್ಲಬ್ ಹೌಸ್ ನ ಹಿಂದುತ್ವ ಕ್ಲಬ್ ನಲ್ಲಿ (ಪೇಜ್ ನಲ್ಲಿ) “ಹಿಂದೂ ಸಮಾವೇಶ” ಆಯೋಜಿಸಲಾಗಿದೆ. ಇದೇ ಆಗಸ್ಟ್ 30 ರಂದು ರಾತ್ರಿ 7.30ಕ್ಕೆ ನಡೆಯಲಿದೆ. ಕ್ಲಬ್ ಹೌಸ್ ನಲ್ಲಿ ಇದು ಮೊದಲ ಪ್ರಯತ್ನವಾಗಿದೆ. 

ಕ್ಲಬ್ ಹೌಸ್ ನಲ್ಲಿ ನಡೆಯುವ ಹಿಂದೂ ಸಮಾವೇಶಕ್ಕೆ ಅದೆಷ್ಟು ಕಿವಿಗಳು ಸಾಕ್ಷಿಯಾಗಬಲ್ಲವೋ ಗೊತ್ತಿಲ್ಲ. ಆದರೆ ಕೌತುಕವನ್ನಂತೂ ಇದು  ಸೃಷ್ಟಿ ಮಾಡಿದೆ ಎಂಬ ಮಾತು ಕೇಳಿ ಬರುತ್ತಿದೆ. ಡಾ. ಕಲ್ಲಡ್ಕ ಪ್ರಭಾಕರ ಭಟ್ ನೇತೃತ್ವ ವಹಿಸಲಿದ್ದಾರೆ. ಹಿಂದೂ ಸಮಾಜದ ಏಳಿಗೆ ಮತ್ತು ಏಳು- ಬೀಳು ಹಾಗೂ ಮುಂದಿನ ಭವಿತವ್ಯದ ಕುರಿತು  ಡಾ. ಭಟ್ ಅವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಜತೆಗೆ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಕಾರ್ಯಕ್ರಮದ ನಿರೂಪಣೆಯನ್ನು ಅಂಕಣಕಾರ ರೋಹಿತ್ ಚಕ್ರತೀರ್ಥ ನಡೆಸಿಕೊಡಲಿದ್ದಾರೆ. 

ಗಾಯಕಿ ರಮ್ಯ ವಸಿಷ್ಟ ಅವರಿಂದ ಪ್ರಾರ್ಥನೆ ಮತ್ತು ವಂದೇ ಮಾತರಂ ಗಾಯನ ನಡೆಯಲಿದೆ. ಒಟ್ಟಿನಲ್ಲಿ 30ರಂದು ಕ್ಲಬ್ ಹೌಸಿನ ಹಿಂದೂ ಸಮಾವೇಶ ಹೊಸದೊಂದು ಸಂಚಲನ ಹುಟ್ಟಿಸುವಲ್ಲಿ ದಾಪುಗಾಲಿಡುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು