12:49 PM Wednesday24 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಅ.3ರಿಂದ ಕೊಟ್ಟಿಗೆಹಾರ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವ ಆರಂಭ

01/10/2024, 21:46

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.ಕಂ

ಕೊಟ್ಟಿಗೆಹಾರದ ಸೀತಾರಾಮ ದೇವಸ್ಥಾನದಲ್ಲಿ ಅ.3ರಿಂದ 12 ರವರೆಗೆ 62ನೇ ಶರನ್ನವರಾತ್ರಿ ಉತ್ಸವ ಆರಂಭವಾಗಲಿದ್ದು, ಸಿದ್ದತೆ ನಡೆಯುತ್ತಿದೆ.

ದೇವಸ್ಥಾನ ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ. ಪಟ್ಟಣವೂ ವಿದ್ಯುತ್ ಅಲಂಕಾರದಿಂದ ಶೋಭಿಸುತ್ತಿದೆ. ಅ 3ರಂದು ಗುರುವಾರ ಸಂಜೆ 6ರಿಂದ 9 ಗಂಟೆವರೆಗೆ ಸಮಿತಿಯವರಿಂದ ಭಜನಾ ಕಾರ್ಯಕ್ರಮ, ನಂತರ ಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿನಿಯೋಗ ನಡೆಯಲಿದೆ. 4ರಂದು ಶುಕ್ರವಾರ ಸಂಜೆ ತರುವೆ ಶ್ರೀ ಶಕ್ತಿಗಣಪತಿ ಭಜನಾ ಮಂಡಳಿ ವತಿಯಿಂದ ಭಜನೆ ಕಾರ್ಯಕ್ರಮ, 5ರಂದು ಶನಿವಾರ ರಾಮನಗರ ಶ್ರೀಮಾರುತಿ ಭಜನಾ ಮಂಡಳಿ ಭಜನಾ ಕಾರ್ಯಕ್ರಮ, 6ರಂದು ಭಾನುವಾರ ಸಂಜೆ ಅಜಾದ್ ನಗರ ಶಬರಿಗಿರಿ ಭಜನಾ ಮಂಡಳಿ ವತಿಯಿಂದ ಭಜನೆ, 7ರಂದು ಸೋಮವಾರ ಬಣಕಲ್ ಶ್ರೀ ಮಹಮ್ಮಾಯಿ ಭಜನಾ ಮಂಡಳಿ ವತಿಯಿಂದ ಭಜನೆ,8ರಂದು ಮಂಗಳವಾರ ದೇವನಗೂಲು ವನದುರ್ಗ ಭಜನಾ ಮಂಡಳಿ ವತಿಯಿಂದ ಭಜನಾ ಕಾರ್ಯಕ್ರಮ ಹಾಗೂ ಕುಮಾರಿ ಆರ್ವಿ ಚೇತನ್ ಅವರಿಂದ ಭರತನಾಟ್ಯ ಕಾರ್ಯಕ್ರಮ, ನಂತರ ಧಾರ್ಮಿಕ ಕಾರ್ಯಕ್ರಮ,9ರಂದು ಬುಧವಾರ ನಿಡುವಾಳೆಯ ಶ್ರೀರಾಮೇಶ್ವರ ಭಜನಾ ಮಂಡಳಿ ವತಿಯಿಂದ ಭಜನೆ, ಮಹಾಮಂಗಳಾರತಿ,ತೀರ್ಥ ಪ್ರಸಾದ ವಿನಿಯೋಗ, 10 ರಂದು ಗುರುವಾರ ಸಮಿತಿಯವರಿಂದ ಭಜನೆ, 11ರಂದು ಶುಕ್ರವಾರ ಭಜನೆ,ಮಹಾಮಂಗಳಾರತಿ ಹಾಗೂ ತೀರ್ಥ ಪ್ರಸಾದ ವಿನಿಯೋಗ, 12 ರಂದು ಶನಿವಾರ ಸಂಜೆ 6ರಿಂದ 10 ಗಂಟೆವರೆಗೆ ಭಜನೆ ಪ್ರಾರಂಭವಾಗಿ ನಗರ ಭಜನೆಯೊಂದಿಗೆ ಅತ್ತಿಗೆರೆ ಗ್ರಾಮದ ಸೋಮೇಶ್ವರ ದೇವಸ್ಥಾನದ ದರ್ಶನ ಪಡೆದು ಬಳಿಕ ಕೊಟ್ಟಿಗೆಹಾರದ ರಾಜಬೀದಿಯಲ್ಲಿ ಕೆಲ್ಲೂರು ಕೊಲ್ಲಿ ಶ್ರೀ ಭಜನಾ ಮಂಡಳಿ ಇವರಿಂದ ಭಜನಾ ಕುಣಿತ, ನಿಸಾನಿ ಮೇಳದೊಂದಿಗೆ ಸೀತಾರಾಮ ದೇವಸ್ಥಾನಕ್ಕೆ ತೆರಳಿ ಭಜನೆ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗದ ಬಳಿಕ ಲಘು ಉಪಹಾರದೊಂದಿಗೆ ಉತ್ಸವ ಕೊನೆಗೊಳ್ಳುತ್ತದೆ ಎಂದು ದೇವಸ್ಥಾನದ ಪ್ರಕಟನೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು