8:41 PM Saturday23 - May 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ…

ಇತ್ತೀಚಿನ ಸುದ್ದಿ

ಅ.3ರಿಂದ ಕೊಟ್ಟಿಗೆಹಾರ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವ ಆರಂಭ

01/10/2024, 21:46

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.ಕಂ

ಕೊಟ್ಟಿಗೆಹಾರದ ಸೀತಾರಾಮ ದೇವಸ್ಥಾನದಲ್ಲಿ ಅ.3ರಿಂದ 12 ರವರೆಗೆ 62ನೇ ಶರನ್ನವರಾತ್ರಿ ಉತ್ಸವ ಆರಂಭವಾಗಲಿದ್ದು, ಸಿದ್ದತೆ ನಡೆಯುತ್ತಿದೆ.

ದೇವಸ್ಥಾನ ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ. ಪಟ್ಟಣವೂ ವಿದ್ಯುತ್ ಅಲಂಕಾರದಿಂದ ಶೋಭಿಸುತ್ತಿದೆ. ಅ 3ರಂದು ಗುರುವಾರ ಸಂಜೆ 6ರಿಂದ 9 ಗಂಟೆವರೆಗೆ ಸಮಿತಿಯವರಿಂದ ಭಜನಾ ಕಾರ್ಯಕ್ರಮ, ನಂತರ ಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿನಿಯೋಗ ನಡೆಯಲಿದೆ. 4ರಂದು ಶುಕ್ರವಾರ ಸಂಜೆ ತರುವೆ ಶ್ರೀ ಶಕ್ತಿಗಣಪತಿ ಭಜನಾ ಮಂಡಳಿ ವತಿಯಿಂದ ಭಜನೆ ಕಾರ್ಯಕ್ರಮ, 5ರಂದು ಶನಿವಾರ ರಾಮನಗರ ಶ್ರೀಮಾರುತಿ ಭಜನಾ ಮಂಡಳಿ ಭಜನಾ ಕಾರ್ಯಕ್ರಮ, 6ರಂದು ಭಾನುವಾರ ಸಂಜೆ ಅಜಾದ್ ನಗರ ಶಬರಿಗಿರಿ ಭಜನಾ ಮಂಡಳಿ ವತಿಯಿಂದ ಭಜನೆ, 7ರಂದು ಸೋಮವಾರ ಬಣಕಲ್ ಶ್ರೀ ಮಹಮ್ಮಾಯಿ ಭಜನಾ ಮಂಡಳಿ ವತಿಯಿಂದ ಭಜನೆ,8ರಂದು ಮಂಗಳವಾರ ದೇವನಗೂಲು ವನದುರ್ಗ ಭಜನಾ ಮಂಡಳಿ ವತಿಯಿಂದ ಭಜನಾ ಕಾರ್ಯಕ್ರಮ ಹಾಗೂ ಕುಮಾರಿ ಆರ್ವಿ ಚೇತನ್ ಅವರಿಂದ ಭರತನಾಟ್ಯ ಕಾರ್ಯಕ್ರಮ, ನಂತರ ಧಾರ್ಮಿಕ ಕಾರ್ಯಕ್ರಮ,9ರಂದು ಬುಧವಾರ ನಿಡುವಾಳೆಯ ಶ್ರೀರಾಮೇಶ್ವರ ಭಜನಾ ಮಂಡಳಿ ವತಿಯಿಂದ ಭಜನೆ, ಮಹಾಮಂಗಳಾರತಿ,ತೀರ್ಥ ಪ್ರಸಾದ ವಿನಿಯೋಗ, 10 ರಂದು ಗುರುವಾರ ಸಮಿತಿಯವರಿಂದ ಭಜನೆ, 11ರಂದು ಶುಕ್ರವಾರ ಭಜನೆ,ಮಹಾಮಂಗಳಾರತಿ ಹಾಗೂ ತೀರ್ಥ ಪ್ರಸಾದ ವಿನಿಯೋಗ, 12 ರಂದು ಶನಿವಾರ ಸಂಜೆ 6ರಿಂದ 10 ಗಂಟೆವರೆಗೆ ಭಜನೆ ಪ್ರಾರಂಭವಾಗಿ ನಗರ ಭಜನೆಯೊಂದಿಗೆ ಅತ್ತಿಗೆರೆ ಗ್ರಾಮದ ಸೋಮೇಶ್ವರ ದೇವಸ್ಥಾನದ ದರ್ಶನ ಪಡೆದು ಬಳಿಕ ಕೊಟ್ಟಿಗೆಹಾರದ ರಾಜಬೀದಿಯಲ್ಲಿ ಕೆಲ್ಲೂರು ಕೊಲ್ಲಿ ಶ್ರೀ ಭಜನಾ ಮಂಡಳಿ ಇವರಿಂದ ಭಜನಾ ಕುಣಿತ, ನಿಸಾನಿ ಮೇಳದೊಂದಿಗೆ ಸೀತಾರಾಮ ದೇವಸ್ಥಾನಕ್ಕೆ ತೆರಳಿ ಭಜನೆ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗದ ಬಳಿಕ ಲಘು ಉಪಹಾರದೊಂದಿಗೆ ಉತ್ಸವ ಕೊನೆಗೊಳ್ಳುತ್ತದೆ ಎಂದು ದೇವಸ್ಥಾನದ ಪ್ರಕಟನೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು