9:50 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಅ.3ರಿಂದ ಕೊಟ್ಟಿಗೆಹಾರ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವ ಆರಂಭ

01/10/2024, 21:46

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.ಕಂ

ಕೊಟ್ಟಿಗೆಹಾರದ ಸೀತಾರಾಮ ದೇವಸ್ಥಾನದಲ್ಲಿ ಅ.3ರಿಂದ 12 ರವರೆಗೆ 62ನೇ ಶರನ್ನವರಾತ್ರಿ ಉತ್ಸವ ಆರಂಭವಾಗಲಿದ್ದು, ಸಿದ್ದತೆ ನಡೆಯುತ್ತಿದೆ.

ದೇವಸ್ಥಾನ ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ. ಪಟ್ಟಣವೂ ವಿದ್ಯುತ್ ಅಲಂಕಾರದಿಂದ ಶೋಭಿಸುತ್ತಿದೆ. ಅ 3ರಂದು ಗುರುವಾರ ಸಂಜೆ 6ರಿಂದ 9 ಗಂಟೆವರೆಗೆ ಸಮಿತಿಯವರಿಂದ ಭಜನಾ ಕಾರ್ಯಕ್ರಮ, ನಂತರ ಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿನಿಯೋಗ ನಡೆಯಲಿದೆ. 4ರಂದು ಶುಕ್ರವಾರ ಸಂಜೆ ತರುವೆ ಶ್ರೀ ಶಕ್ತಿಗಣಪತಿ ಭಜನಾ ಮಂಡಳಿ ವತಿಯಿಂದ ಭಜನೆ ಕಾರ್ಯಕ್ರಮ, 5ರಂದು ಶನಿವಾರ ರಾಮನಗರ ಶ್ರೀಮಾರುತಿ ಭಜನಾ ಮಂಡಳಿ ಭಜನಾ ಕಾರ್ಯಕ್ರಮ, 6ರಂದು ಭಾನುವಾರ ಸಂಜೆ ಅಜಾದ್ ನಗರ ಶಬರಿಗಿರಿ ಭಜನಾ ಮಂಡಳಿ ವತಿಯಿಂದ ಭಜನೆ, 7ರಂದು ಸೋಮವಾರ ಬಣಕಲ್ ಶ್ರೀ ಮಹಮ್ಮಾಯಿ ಭಜನಾ ಮಂಡಳಿ ವತಿಯಿಂದ ಭಜನೆ,8ರಂದು ಮಂಗಳವಾರ ದೇವನಗೂಲು ವನದುರ್ಗ ಭಜನಾ ಮಂಡಳಿ ವತಿಯಿಂದ ಭಜನಾ ಕಾರ್ಯಕ್ರಮ ಹಾಗೂ ಕುಮಾರಿ ಆರ್ವಿ ಚೇತನ್ ಅವರಿಂದ ಭರತನಾಟ್ಯ ಕಾರ್ಯಕ್ರಮ, ನಂತರ ಧಾರ್ಮಿಕ ಕಾರ್ಯಕ್ರಮ,9ರಂದು ಬುಧವಾರ ನಿಡುವಾಳೆಯ ಶ್ರೀರಾಮೇಶ್ವರ ಭಜನಾ ಮಂಡಳಿ ವತಿಯಿಂದ ಭಜನೆ, ಮಹಾಮಂಗಳಾರತಿ,ತೀರ್ಥ ಪ್ರಸಾದ ವಿನಿಯೋಗ, 10 ರಂದು ಗುರುವಾರ ಸಮಿತಿಯವರಿಂದ ಭಜನೆ, 11ರಂದು ಶುಕ್ರವಾರ ಭಜನೆ,ಮಹಾಮಂಗಳಾರತಿ ಹಾಗೂ ತೀರ್ಥ ಪ್ರಸಾದ ವಿನಿಯೋಗ, 12 ರಂದು ಶನಿವಾರ ಸಂಜೆ 6ರಿಂದ 10 ಗಂಟೆವರೆಗೆ ಭಜನೆ ಪ್ರಾರಂಭವಾಗಿ ನಗರ ಭಜನೆಯೊಂದಿಗೆ ಅತ್ತಿಗೆರೆ ಗ್ರಾಮದ ಸೋಮೇಶ್ವರ ದೇವಸ್ಥಾನದ ದರ್ಶನ ಪಡೆದು ಬಳಿಕ ಕೊಟ್ಟಿಗೆಹಾರದ ರಾಜಬೀದಿಯಲ್ಲಿ ಕೆಲ್ಲೂರು ಕೊಲ್ಲಿ ಶ್ರೀ ಭಜನಾ ಮಂಡಳಿ ಇವರಿಂದ ಭಜನಾ ಕುಣಿತ, ನಿಸಾನಿ ಮೇಳದೊಂದಿಗೆ ಸೀತಾರಾಮ ದೇವಸ್ಥಾನಕ್ಕೆ ತೆರಳಿ ಭಜನೆ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗದ ಬಳಿಕ ಲಘು ಉಪಹಾರದೊಂದಿಗೆ ಉತ್ಸವ ಕೊನೆಗೊಳ್ಳುತ್ತದೆ ಎಂದು ದೇವಸ್ಥಾನದ ಪ್ರಕಟನೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು