12:39 AM Saturday8 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಅ.3ರಿಂದ ಕೊಟ್ಟಿಗೆಹಾರ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವ ಆರಂಭ

01/10/2024, 21:46

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.ಕಂ

ಕೊಟ್ಟಿಗೆಹಾರದ ಸೀತಾರಾಮ ದೇವಸ್ಥಾನದಲ್ಲಿ ಅ.3ರಿಂದ 12 ರವರೆಗೆ 62ನೇ ಶರನ್ನವರಾತ್ರಿ ಉತ್ಸವ ಆರಂಭವಾಗಲಿದ್ದು, ಸಿದ್ದತೆ ನಡೆಯುತ್ತಿದೆ.

ದೇವಸ್ಥಾನ ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ. ಪಟ್ಟಣವೂ ವಿದ್ಯುತ್ ಅಲಂಕಾರದಿಂದ ಶೋಭಿಸುತ್ತಿದೆ. ಅ 3ರಂದು ಗುರುವಾರ ಸಂಜೆ 6ರಿಂದ 9 ಗಂಟೆವರೆಗೆ ಸಮಿತಿಯವರಿಂದ ಭಜನಾ ಕಾರ್ಯಕ್ರಮ, ನಂತರ ಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿನಿಯೋಗ ನಡೆಯಲಿದೆ. 4ರಂದು ಶುಕ್ರವಾರ ಸಂಜೆ ತರುವೆ ಶ್ರೀ ಶಕ್ತಿಗಣಪತಿ ಭಜನಾ ಮಂಡಳಿ ವತಿಯಿಂದ ಭಜನೆ ಕಾರ್ಯಕ್ರಮ, 5ರಂದು ಶನಿವಾರ ರಾಮನಗರ ಶ್ರೀಮಾರುತಿ ಭಜನಾ ಮಂಡಳಿ ಭಜನಾ ಕಾರ್ಯಕ್ರಮ, 6ರಂದು ಭಾನುವಾರ ಸಂಜೆ ಅಜಾದ್ ನಗರ ಶಬರಿಗಿರಿ ಭಜನಾ ಮಂಡಳಿ ವತಿಯಿಂದ ಭಜನೆ, 7ರಂದು ಸೋಮವಾರ ಬಣಕಲ್ ಶ್ರೀ ಮಹಮ್ಮಾಯಿ ಭಜನಾ ಮಂಡಳಿ ವತಿಯಿಂದ ಭಜನೆ,8ರಂದು ಮಂಗಳವಾರ ದೇವನಗೂಲು ವನದುರ್ಗ ಭಜನಾ ಮಂಡಳಿ ವತಿಯಿಂದ ಭಜನಾ ಕಾರ್ಯಕ್ರಮ ಹಾಗೂ ಕುಮಾರಿ ಆರ್ವಿ ಚೇತನ್ ಅವರಿಂದ ಭರತನಾಟ್ಯ ಕಾರ್ಯಕ್ರಮ, ನಂತರ ಧಾರ್ಮಿಕ ಕಾರ್ಯಕ್ರಮ,9ರಂದು ಬುಧವಾರ ನಿಡುವಾಳೆಯ ಶ್ರೀರಾಮೇಶ್ವರ ಭಜನಾ ಮಂಡಳಿ ವತಿಯಿಂದ ಭಜನೆ, ಮಹಾಮಂಗಳಾರತಿ,ತೀರ್ಥ ಪ್ರಸಾದ ವಿನಿಯೋಗ, 10 ರಂದು ಗುರುವಾರ ಸಮಿತಿಯವರಿಂದ ಭಜನೆ, 11ರಂದು ಶುಕ್ರವಾರ ಭಜನೆ,ಮಹಾಮಂಗಳಾರತಿ ಹಾಗೂ ತೀರ್ಥ ಪ್ರಸಾದ ವಿನಿಯೋಗ, 12 ರಂದು ಶನಿವಾರ ಸಂಜೆ 6ರಿಂದ 10 ಗಂಟೆವರೆಗೆ ಭಜನೆ ಪ್ರಾರಂಭವಾಗಿ ನಗರ ಭಜನೆಯೊಂದಿಗೆ ಅತ್ತಿಗೆರೆ ಗ್ರಾಮದ ಸೋಮೇಶ್ವರ ದೇವಸ್ಥಾನದ ದರ್ಶನ ಪಡೆದು ಬಳಿಕ ಕೊಟ್ಟಿಗೆಹಾರದ ರಾಜಬೀದಿಯಲ್ಲಿ ಕೆಲ್ಲೂರು ಕೊಲ್ಲಿ ಶ್ರೀ ಭಜನಾ ಮಂಡಳಿ ಇವರಿಂದ ಭಜನಾ ಕುಣಿತ, ನಿಸಾನಿ ಮೇಳದೊಂದಿಗೆ ಸೀತಾರಾಮ ದೇವಸ್ಥಾನಕ್ಕೆ ತೆರಳಿ ಭಜನೆ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗದ ಬಳಿಕ ಲಘು ಉಪಹಾರದೊಂದಿಗೆ ಉತ್ಸವ ಕೊನೆಗೊಳ್ಳುತ್ತದೆ ಎಂದು ದೇವಸ್ಥಾನದ ಪ್ರಕಟನೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು