9:12 AM Saturday27 - December 2025
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:… ಮೂಡಿಗೆರೆ ತಾಪಂ ಇಒ ದರ್ಬಾರ್‌: ಸರ್ಕಾರಿ ಜೀಪ್‌ ಖಾಸಗಿಯಾಗಿ ದುರ್ಬಳಕೆ; ನಿತ್ಯ 60… ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;…

ಇತ್ತೀಚಿನ ಸುದ್ದಿ

ಅ.3ರಿಂದ ಕೊಟ್ಟಿಗೆಹಾರ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವ ಆರಂಭ

01/10/2024, 21:46

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.ಕಂ

ಕೊಟ್ಟಿಗೆಹಾರದ ಸೀತಾರಾಮ ದೇವಸ್ಥಾನದಲ್ಲಿ ಅ.3ರಿಂದ 12 ರವರೆಗೆ 62ನೇ ಶರನ್ನವರಾತ್ರಿ ಉತ್ಸವ ಆರಂಭವಾಗಲಿದ್ದು, ಸಿದ್ದತೆ ನಡೆಯುತ್ತಿದೆ.

ದೇವಸ್ಥಾನ ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ. ಪಟ್ಟಣವೂ ವಿದ್ಯುತ್ ಅಲಂಕಾರದಿಂದ ಶೋಭಿಸುತ್ತಿದೆ. ಅ 3ರಂದು ಗುರುವಾರ ಸಂಜೆ 6ರಿಂದ 9 ಗಂಟೆವರೆಗೆ ಸಮಿತಿಯವರಿಂದ ಭಜನಾ ಕಾರ್ಯಕ್ರಮ, ನಂತರ ಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿನಿಯೋಗ ನಡೆಯಲಿದೆ. 4ರಂದು ಶುಕ್ರವಾರ ಸಂಜೆ ತರುವೆ ಶ್ರೀ ಶಕ್ತಿಗಣಪತಿ ಭಜನಾ ಮಂಡಳಿ ವತಿಯಿಂದ ಭಜನೆ ಕಾರ್ಯಕ್ರಮ, 5ರಂದು ಶನಿವಾರ ರಾಮನಗರ ಶ್ರೀಮಾರುತಿ ಭಜನಾ ಮಂಡಳಿ ಭಜನಾ ಕಾರ್ಯಕ್ರಮ, 6ರಂದು ಭಾನುವಾರ ಸಂಜೆ ಅಜಾದ್ ನಗರ ಶಬರಿಗಿರಿ ಭಜನಾ ಮಂಡಳಿ ವತಿಯಿಂದ ಭಜನೆ, 7ರಂದು ಸೋಮವಾರ ಬಣಕಲ್ ಶ್ರೀ ಮಹಮ್ಮಾಯಿ ಭಜನಾ ಮಂಡಳಿ ವತಿಯಿಂದ ಭಜನೆ,8ರಂದು ಮಂಗಳವಾರ ದೇವನಗೂಲು ವನದುರ್ಗ ಭಜನಾ ಮಂಡಳಿ ವತಿಯಿಂದ ಭಜನಾ ಕಾರ್ಯಕ್ರಮ ಹಾಗೂ ಕುಮಾರಿ ಆರ್ವಿ ಚೇತನ್ ಅವರಿಂದ ಭರತನಾಟ್ಯ ಕಾರ್ಯಕ್ರಮ, ನಂತರ ಧಾರ್ಮಿಕ ಕಾರ್ಯಕ್ರಮ,9ರಂದು ಬುಧವಾರ ನಿಡುವಾಳೆಯ ಶ್ರೀರಾಮೇಶ್ವರ ಭಜನಾ ಮಂಡಳಿ ವತಿಯಿಂದ ಭಜನೆ, ಮಹಾಮಂಗಳಾರತಿ,ತೀರ್ಥ ಪ್ರಸಾದ ವಿನಿಯೋಗ, 10 ರಂದು ಗುರುವಾರ ಸಮಿತಿಯವರಿಂದ ಭಜನೆ, 11ರಂದು ಶುಕ್ರವಾರ ಭಜನೆ,ಮಹಾಮಂಗಳಾರತಿ ಹಾಗೂ ತೀರ್ಥ ಪ್ರಸಾದ ವಿನಿಯೋಗ, 12 ರಂದು ಶನಿವಾರ ಸಂಜೆ 6ರಿಂದ 10 ಗಂಟೆವರೆಗೆ ಭಜನೆ ಪ್ರಾರಂಭವಾಗಿ ನಗರ ಭಜನೆಯೊಂದಿಗೆ ಅತ್ತಿಗೆರೆ ಗ್ರಾಮದ ಸೋಮೇಶ್ವರ ದೇವಸ್ಥಾನದ ದರ್ಶನ ಪಡೆದು ಬಳಿಕ ಕೊಟ್ಟಿಗೆಹಾರದ ರಾಜಬೀದಿಯಲ್ಲಿ ಕೆಲ್ಲೂರು ಕೊಲ್ಲಿ ಶ್ರೀ ಭಜನಾ ಮಂಡಳಿ ಇವರಿಂದ ಭಜನಾ ಕುಣಿತ, ನಿಸಾನಿ ಮೇಳದೊಂದಿಗೆ ಸೀತಾರಾಮ ದೇವಸ್ಥಾನಕ್ಕೆ ತೆರಳಿ ಭಜನೆ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗದ ಬಳಿಕ ಲಘು ಉಪಹಾರದೊಂದಿಗೆ ಉತ್ಸವ ಕೊನೆಗೊಳ್ಳುತ್ತದೆ ಎಂದು ದೇವಸ್ಥಾನದ ಪ್ರಕಟನೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು