1:45 AM Thursday20 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಅ.3ರಿಂದ ಕೊಟ್ಟಿಗೆಹಾರ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವ ಆರಂಭ

01/10/2024, 21:46

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.ಕಂ

ಕೊಟ್ಟಿಗೆಹಾರದ ಸೀತಾರಾಮ ದೇವಸ್ಥಾನದಲ್ಲಿ ಅ.3ರಿಂದ 12 ರವರೆಗೆ 62ನೇ ಶರನ್ನವರಾತ್ರಿ ಉತ್ಸವ ಆರಂಭವಾಗಲಿದ್ದು, ಸಿದ್ದತೆ ನಡೆಯುತ್ತಿದೆ.

ದೇವಸ್ಥಾನ ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ. ಪಟ್ಟಣವೂ ವಿದ್ಯುತ್ ಅಲಂಕಾರದಿಂದ ಶೋಭಿಸುತ್ತಿದೆ. ಅ 3ರಂದು ಗುರುವಾರ ಸಂಜೆ 6ರಿಂದ 9 ಗಂಟೆವರೆಗೆ ಸಮಿತಿಯವರಿಂದ ಭಜನಾ ಕಾರ್ಯಕ್ರಮ, ನಂತರ ಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿನಿಯೋಗ ನಡೆಯಲಿದೆ. 4ರಂದು ಶುಕ್ರವಾರ ಸಂಜೆ ತರುವೆ ಶ್ರೀ ಶಕ್ತಿಗಣಪತಿ ಭಜನಾ ಮಂಡಳಿ ವತಿಯಿಂದ ಭಜನೆ ಕಾರ್ಯಕ್ರಮ, 5ರಂದು ಶನಿವಾರ ರಾಮನಗರ ಶ್ರೀಮಾರುತಿ ಭಜನಾ ಮಂಡಳಿ ಭಜನಾ ಕಾರ್ಯಕ್ರಮ, 6ರಂದು ಭಾನುವಾರ ಸಂಜೆ ಅಜಾದ್ ನಗರ ಶಬರಿಗಿರಿ ಭಜನಾ ಮಂಡಳಿ ವತಿಯಿಂದ ಭಜನೆ, 7ರಂದು ಸೋಮವಾರ ಬಣಕಲ್ ಶ್ರೀ ಮಹಮ್ಮಾಯಿ ಭಜನಾ ಮಂಡಳಿ ವತಿಯಿಂದ ಭಜನೆ,8ರಂದು ಮಂಗಳವಾರ ದೇವನಗೂಲು ವನದುರ್ಗ ಭಜನಾ ಮಂಡಳಿ ವತಿಯಿಂದ ಭಜನಾ ಕಾರ್ಯಕ್ರಮ ಹಾಗೂ ಕುಮಾರಿ ಆರ್ವಿ ಚೇತನ್ ಅವರಿಂದ ಭರತನಾಟ್ಯ ಕಾರ್ಯಕ್ರಮ, ನಂತರ ಧಾರ್ಮಿಕ ಕಾರ್ಯಕ್ರಮ,9ರಂದು ಬುಧವಾರ ನಿಡುವಾಳೆಯ ಶ್ರೀರಾಮೇಶ್ವರ ಭಜನಾ ಮಂಡಳಿ ವತಿಯಿಂದ ಭಜನೆ, ಮಹಾಮಂಗಳಾರತಿ,ತೀರ್ಥ ಪ್ರಸಾದ ವಿನಿಯೋಗ, 10 ರಂದು ಗುರುವಾರ ಸಮಿತಿಯವರಿಂದ ಭಜನೆ, 11ರಂದು ಶುಕ್ರವಾರ ಭಜನೆ,ಮಹಾಮಂಗಳಾರತಿ ಹಾಗೂ ತೀರ್ಥ ಪ್ರಸಾದ ವಿನಿಯೋಗ, 12 ರಂದು ಶನಿವಾರ ಸಂಜೆ 6ರಿಂದ 10 ಗಂಟೆವರೆಗೆ ಭಜನೆ ಪ್ರಾರಂಭವಾಗಿ ನಗರ ಭಜನೆಯೊಂದಿಗೆ ಅತ್ತಿಗೆರೆ ಗ್ರಾಮದ ಸೋಮೇಶ್ವರ ದೇವಸ್ಥಾನದ ದರ್ಶನ ಪಡೆದು ಬಳಿಕ ಕೊಟ್ಟಿಗೆಹಾರದ ರಾಜಬೀದಿಯಲ್ಲಿ ಕೆಲ್ಲೂರು ಕೊಲ್ಲಿ ಶ್ರೀ ಭಜನಾ ಮಂಡಳಿ ಇವರಿಂದ ಭಜನಾ ಕುಣಿತ, ನಿಸಾನಿ ಮೇಳದೊಂದಿಗೆ ಸೀತಾರಾಮ ದೇವಸ್ಥಾನಕ್ಕೆ ತೆರಳಿ ಭಜನೆ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗದ ಬಳಿಕ ಲಘು ಉಪಹಾರದೊಂದಿಗೆ ಉತ್ಸವ ಕೊನೆಗೊಳ್ಳುತ್ತದೆ ಎಂದು ದೇವಸ್ಥಾನದ ಪ್ರಕಟನೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು