8:19 AM Sunday8 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಅ.16ರಂದು ದಸರಾ ಬಹುಭಾಷಾ ಕವಿಗೋಷ್ಠಿ: ಕೊರಗ, ಕುಂದ ಕನ್ನಡ, ತುಳು ಸಹಿತ 12 ಭಾಷೆಗಳ ಕವಿತಾ ವಾಚನ

12/10/2023, 21:27

ಮಂಗಳೂರು(reporterkarnataka.com): ತುಳು ಪರಿಷತ್ ವತಿಯಿಂದ ಮಯೂರಿ ಫೌಂಡೇಶನ್ ಸಹಭಾಗಿತ್ವದಲ್ಲಿ ದಸರಾ ಬಹುಭಾಷಾ ಕವಿಗೋಷ್ಠಿ ನಗರದ ಬಂಟ್ಸ್ ಹಾಸ್ಟೆಲ್ ಸಮೀಪದ ಮ್ಯಾಪ್ಸ್ ಕಾಲೇಜಿನಲ್ಲಿ ಅ.16ರಂದು ಅಪರಾಹ್ನ 2.00 ಗಂಟೆಗೆ ನಡೆಯಲಿದೆ.
ಎರಡನೇ ವರ್ಷದ ಈ ದಸರಾ ಬಹುಭಾಷಾ ಕವಿಗೋಷ್ಠಿಯನ್ನು ಸುಳ್ಯ ಬಂಟಮಲೆ ಅಕಾಡೆಮಿಯ ಅಧ್ಯಕ್ಷ ಎ.ಕೆ.ಹಿಮಕರ ಅವರು ಉದ್ಘಾಟಿಸುವರು.ಅಧ್ಯಕ್ಷತೆಯನ್ನು ನಿವೃತ್ತ ಉಪನ್ಯಾಸಕಿ ಹಾಗೂ ಲೇಖಕಿ ಡಾ.ಮೀನಾಕ್ಷಿ ರಾಮಚಂದ್ರ ವಹಿಸುವರು.
ಬಹುಭಾಷಾ ಕವಿಗೋಷ್ಠಿಯಲ್ಲಿ ತುಳುನಾಡಿನ 12 ಭಾಷೆಗಳಲ್ಲಿ ಕವಿತಾ ವಾಚನ ನಡೆಯಲಿದೆ.
ತುಳು, ಕನ್ನಡ, ಬ್ಯಾರಿ, ಅರೆಭಾಷೆ, ಕುಂದ ಕನ್ನಡ, ಹವ್ಯಕ ಕನ್ನಡ , ಶಿವಳ್ಳಿ ತುಳು, ಸ್ಥಾನಿಕ ತುಳು , ಕೊರಗ ಭಾಷೆ, ಜಿ.ಎಸ್. ಬಿ ಕೊಂಕಣಿ , ಕ್ರೈಸ್ತ ಕೊಂಕಣಿ , ಮಳಯಾಲಂ ಭಾಷೆಗಳ ಕವಿಗಳು ಕವಿತೆ ವಾಚಿಸುವರು. ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕವಿಗಳು ಈ ದಸರಾ ಬಹುಭಾಷಾ ಕವಿಗೋಷ್ಠಿಯಲ್ಲಿ ಭಾಗವಹಿಸುವರು ಎಂದು ತುಳು ಪರಿಷತ್ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು