10:02 PM Tuesday20 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ಅ.16ರಂದು ದಸರಾ ಬಹುಭಾಷಾ ಕವಿಗೋಷ್ಠಿ: ಕೊರಗ, ಕುಂದ ಕನ್ನಡ, ತುಳು ಸಹಿತ 12 ಭಾಷೆಗಳ ಕವಿತಾ ವಾಚನ

12/10/2023, 21:27

ಮಂಗಳೂರು(reporterkarnataka.com): ತುಳು ಪರಿಷತ್ ವತಿಯಿಂದ ಮಯೂರಿ ಫೌಂಡೇಶನ್ ಸಹಭಾಗಿತ್ವದಲ್ಲಿ ದಸರಾ ಬಹುಭಾಷಾ ಕವಿಗೋಷ್ಠಿ ನಗರದ ಬಂಟ್ಸ್ ಹಾಸ್ಟೆಲ್ ಸಮೀಪದ ಮ್ಯಾಪ್ಸ್ ಕಾಲೇಜಿನಲ್ಲಿ ಅ.16ರಂದು ಅಪರಾಹ್ನ 2.00 ಗಂಟೆಗೆ ನಡೆಯಲಿದೆ.
ಎರಡನೇ ವರ್ಷದ ಈ ದಸರಾ ಬಹುಭಾಷಾ ಕವಿಗೋಷ್ಠಿಯನ್ನು ಸುಳ್ಯ ಬಂಟಮಲೆ ಅಕಾಡೆಮಿಯ ಅಧ್ಯಕ್ಷ ಎ.ಕೆ.ಹಿಮಕರ ಅವರು ಉದ್ಘಾಟಿಸುವರು.ಅಧ್ಯಕ್ಷತೆಯನ್ನು ನಿವೃತ್ತ ಉಪನ್ಯಾಸಕಿ ಹಾಗೂ ಲೇಖಕಿ ಡಾ.ಮೀನಾಕ್ಷಿ ರಾಮಚಂದ್ರ ವಹಿಸುವರು.
ಬಹುಭಾಷಾ ಕವಿಗೋಷ್ಠಿಯಲ್ಲಿ ತುಳುನಾಡಿನ 12 ಭಾಷೆಗಳಲ್ಲಿ ಕವಿತಾ ವಾಚನ ನಡೆಯಲಿದೆ.
ತುಳು, ಕನ್ನಡ, ಬ್ಯಾರಿ, ಅರೆಭಾಷೆ, ಕುಂದ ಕನ್ನಡ, ಹವ್ಯಕ ಕನ್ನಡ , ಶಿವಳ್ಳಿ ತುಳು, ಸ್ಥಾನಿಕ ತುಳು , ಕೊರಗ ಭಾಷೆ, ಜಿ.ಎಸ್. ಬಿ ಕೊಂಕಣಿ , ಕ್ರೈಸ್ತ ಕೊಂಕಣಿ , ಮಳಯಾಲಂ ಭಾಷೆಗಳ ಕವಿಗಳು ಕವಿತೆ ವಾಚಿಸುವರು. ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕವಿಗಳು ಈ ದಸರಾ ಬಹುಭಾಷಾ ಕವಿಗೋಷ್ಠಿಯಲ್ಲಿ ಭಾಗವಹಿಸುವರು ಎಂದು ತುಳು ಪರಿಷತ್ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು