2:33 AM Thursday19 - February 2026
ಬ್ರೇಕಿಂಗ್ ನ್ಯೂಸ್
ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8…

ಇತ್ತೀಚಿನ ಸುದ್ದಿ

ಆಟೋ ಚಾಲಕರುಗಳಲ್ಲಿ ಗೊಂದಲ ಬೇಡ, ನಾನು ಯಾವುದೇ ರೀತಿಯ ಆದೇಶವನ್ನು ಹೊರಡಿಸಿಲ್ಲ: ಜಿಲ್ಲಾಧಿಕಾರಿ

30/08/2024, 10:39

ಮಂಗಳೂರು(reporterkarnataka.com): ಕೇಂದ್ರ ಮೋಟರ್ ಸೈಕಲ್ ಕಾಯ್ದೆ ಸೆಕ್ಷನ್ 66-1ರ ಪ್ರಕಾರ ಇ-ಆಟೋರಿಕ್ಷಾಗಳಿಗೆ ಯಾವುದೇ ರೀತಿಯ ನಿರ್ಬಂಧ, ಕಾನೂನುಗಳನ್ನು ಜಾರಿಗೊಳಿಸುವ ಅಧಿಕಾರ ನಮಗೆ ಇಲ್ಲ. ಜಿಲ್ಲೆಯಲ್ಲಿನ ಆಟೋರಿಕ್ಷಾ ಚಾಲಕರುಗಳಲ್ಲಿ ಗೊಂದಲಗಳಿದ್ದು, ನಾನು ಯಾವುದೇ ರೀತಿಯ ಆದೇಶವನ್ನು ಹೊರಡಿಸಿಲ್ಲ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಸ್ಪಷ್ಟಪಡಿಸಿದರು.
ಅವರು ತಮ್ಮ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿ, ನಾವು ಇಲ್ಲಿ 1993-94 ರಿಂದಲೂ ಅನ್ವಯವಾಗಿರುವ ಆದೇಶದಂತೆ ನಡೆದುಕೊಂಡು ಬರುತ್ತಿದ್ದು, ಇಲ್ಲಿಯ ತನಕ ಯಾವುದೇ ರೀತಿಯ ಬದಲಾವಣೆಗಳನ್ನು ತಂದಿಲ್ಲ. ಈ ಮೊದಲು ಎಲ್‌ಪಿಜಿ-ಸಿಎನ್‌ಜಿ ಆಟೋ ರಿಕ್ಷಾ ಚಾಲಕರ ಹಿತ ದೃಷ್ಠಿಯಿಂದ ಈ ಹಿಂದಿನ ಜಿಲ್ಲಾಧಿಕಾರಿಗಳು ರಾಜ್ಯ ಮೋಟರ್ ಸೈಕಲ್ ಕಾಯ್ದೆ 115ರ ಪ್ರಕಾರ ವಲಯ-1, ವಲಯ-2 ಎಂದು ವಿಭಜಿಸಿದ್ದು, ಇತ್ತೀಚೆಗೆ ಬಂದಂತಹ ಇ-ಅಟೋ ರಿಕ್ಷಾಗಳು ಈ ನಿಯಮವನ್ನು ಪಾಲಿಸಿದ್ದು, ಇಷ್ಟೆಲ್ಲ ಗೊಂದಲಗಳಿಗೆ ಕಾರಣವಾಗಿದೆ ಎಂದು ಹೇಳಿದರು.
ಕೇಂದ್ರ ಮೋಟರ್ ಸೈಕಲ್ ಕಾಯ್ದೆ ಸೆಕ್ಷನ್ 66-1ರಲ್ಲಿಯೇ ಇ-ಆಟೋ ರಿಕ್ಷಾಗಳಿಗೆ ರಿಯಾಯಿತಿಯನ್ನು ನೀಡಿದ್ದು, ನಾವು ಯಾವುದೇ ರೀತಿಯ ಆದೇಶ, ಕಾನೂನು, ನಿಯಮಗಳನ್ನು ಹೊರಿಸಲು ಸಾಧ್ಯವಿಲ್ಲ. ನಾವು ಯಾವುದೇ ನಿಯಮ ಮಾಡಬೇಕಾದರೂ ರಾಜ್ಯ ಮೋಟರ್ ಸೈಕಲ್ ಕಾಯ್ದೆ 115 ರ ಅಡಿಯಲ್ಲಿ ನಿಯಮ ಮಾಡಬೇಕು ಆದರೆ ಅವರಿಗೆ ಸೆಕ್ಷನ್ 66-1 ರಲ್ಲಿಯೇ ರಿಯಾಯಿತಿ ಇರುವುದರಿಂದ ನಾವು ಏನನ್ನು ಮಾಡಲು ಬರುವುದಿಲ್ಲ ಎಂದರು.
ಎಲ್‌ಪಿಜಿ-ಸಿಎನ್‌ಜಿ ಆಟೋ ರಿಕ್ಷಾ ಚಾಲಕರು ಮತ್ತು ಇ-ಆಟೋ ರಿಕ್ಷಾ ಚಾಲಕರು ಹೈಕೋರ್ಟ್‌ಗೆ ಹೋಗಿದ್ದು, ಹೈಕೋರ್ಟ್ ಕೇಂದ್ರ ಮೋಟರ್ ಸೈಕಲ್ ಕಾಯ್ದೆಯನ್ನು ಎತ್ತಿ ಹಿಡಿದುದ್ದು, ಅದರ ಆದೇಶದಂತೆ ನಾವು ನಿರ್ದೇಶನವನ್ನು ನೀಡಿದ್ದೆವೆಯೇ ಹೊರತು ಯಾವುದೇ ರೀತಿಯಲ್ಲಿಯೂ ಇ-ಆಟೋ ರಿಕ್ಷಾ ಚಾಲಕರ ಪರವಾಗಿ ನಾವು ನಿರ್ದೇಶನವನ್ನು ನೀಡಿಲ್ಲ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು