9:28 PM Saturday8 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಆಟೋರಿಕ್ಷಾದಡಿ ಸಿಲುಕಿ ಒದ್ದಾಡುತ್ತಿದ್ದ ಹೆತ್ತಬ್ಬೆಯ ರಕ್ಷಿಸಿದ ಬಾಲಕಿಗೆ ಜಿಲ್ಲಾಧಿಕಾರಿ ಸನ್ಮಾನ

10/09/2024, 21:54

ಮಂಗಳೂರು(reporterkarnataka.com): ಕಿನ್ನಿಗೋಳಿಯಲ್ಲಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ತಾಯಿಗೆ ರಿಕ್ಷಾ ಡಿಕ್ಕಿ ಆಗಿ ಅದರಡಿಗೆ ಬಿದ್ದಿದ್ದ ತಾಯಿಯನ್ನು ತಕ್ಷಣವೇ ಧಾವಿಸಿ ಬಂದು ರಕ್ಷಿಸಿದ ಬಾಲಕಿ ವೈಭವಿಯನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಮಂಗಳವಾರ ತಮ್ಮ ಕಚೇರಿಯಲ್ಲಿ ಸನ್ಮಾನಿಸಿದರು.
7ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ವೈಭವಿ ಅವರಿಗೆ ಜಿಲ್ಲಾಧಿಕಾರಿ ಕಚೇರಿಯ ತಮ್ಮ ಕೊಠಡಿಯಲ್ಲಿ ಪೇಟ, ಹಾರ ತೊಡಿಸಿ ಸನ್ಮಾನಿಸಿದ ಜಿಲ್ಲಾಧಿಕಾರಿಗಳು ಬಾಲಕಿಯ ಸಮಯ ಪ್ರಜ್ಞೆ ಮತ್ತು ಧೈರ್ಯವನ್ನು ಶ್ಲಾಘಿಸಿದರು. ವೈಭವಿಯ ಈ ಪ್ರಜ್ಞೆ ಎಲ್ಲರಿಗೂ ಮಾದರಿಯಾಗಿದೆ. ಶಾಲಾ ಹಂತದಲ್ಲಿ ಮಕ್ಕಳಿಗೆ ಇಂತಹ ಸಮಯ ಪ್ರಜ್ಞೆ ಮತ್ತು ಧೈರ್ಯ ಮೂಡಿ ಬರಬೇಕಿದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಜಿ ಸಂತೋಷ್ ಕುಮಾರ್, ಸಮಾಜ ಕಲ್ಯಾಣ ಉಪನಿರ್ದೇಶಕ ಹೇಮಲತಾ, ಸಹಾಯಕ ನಿರ್ದೇಶಕ ಸುರೇಶ್ ಅಡಿಗ ಮತ್ತು ವೈಭವಿ ಪಾಲಕರು ಉಪಸ್ಥಿತರಿದ್ದರು ವೈಭವಿಯ ಧೈರ್ಯವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೂ ಸಾಮಾಜಿಕ ಜಾಲತಾಣದಲ್ಲಿ ಶ್ಲಾಘಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು