4:53 PM Sunday21 - June 2026
ಬ್ರೇಕಿಂಗ್ ನ್ಯೂಸ್
Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ

ಇತ್ತೀಚಿನ ಸುದ್ದಿ

ಆಟೋರಿಕ್ಷಾದಲ್ಲಿ ಗಾಂಜಾ ಮಾರಾಟ: 3 ಮಂದಿ ಆರೋಪಿಗಳ ಬಂಧನ; 1.36 ಲಕ್ಷ ಮೌಲ್ಯದ ಸೊತ್ತು ವಶ

31/07/2023, 22:23

ಮಂಗಳೂರು(reporterkarnataka.com): ನಗರದ ಬರ್ಕೆ ಪೊಲೀಸ್‌ ಠಾಣಾ ವ್ಯಾಪ್ತಿಯ ಬೋಳೂರು ಪರಿಸರದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ 3 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಗಣೇಶ್, ರಾಹುಲ್ ಗಟ್ಟಿ ಮತ್ತು ಅಭಿಲಾಷ್ ಕರ್ಕೇರ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಆರೋಪಿಗಳು
ಆಟೋರಿಕ್ಷಾದಲ್ಲಿ ಗಾಂಜಾ ತಂದು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾರೆಂಬ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಮಂಗಳೂರು ನಗರದ ಬರ್ಕೆ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ದಾಳಿ ನಡೆಸಿ ಮಾದಕ ವಸ್ತುವಾದ ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಈ ಮೂವರನ್ನು ದಸ್ತಗಿರಿ ಮಾಡಿದ್ದಾರೆ. ಬಂಧಿತರಿಂದ 2 ಕೆಜಿ 133 ಗ್ರಾಂ ಗಾಂಜಾ ಮತ್ತು ಗಾಂಜಾ ಮಾರಾಟಕ್ಕೆ ಬಳಕೆ ಮಾಡುತ್ತಿದ್ದ ಆಟೋ ರಿಕ್ಷಾ (ಸಂಖ್ಯೆ-ಕೆಎ19 ಎಎ2906) ಹಾಗೂ 3 ಮೊಬೈಲ್ ಗಳನ್ನು ವಶಪಡಿಸಿಕೊಂಡಿದ್ದಾರೆ.
ಅಂದಾಜು 1.36 ಲಕ್ಷ ರೂ. ಮೌಲ್ಯದ ಸೊತ್ತು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಕಾಯಿದೆಯಡಿ ಪ್ರಕರಣದ ದಾಖಲಿಸಿ ತನಿಖೆ ನಡೆಯುತ್ತಿದೆ.
ಈ ಕಾರ್ಯಾಚರಣೆಯಲ್ಲಿ ಪೊಲೀಸ್ ಆಯುಕ್ತ
ಕುಲದೀಪ್ ಕುಮಾರ್ ಆರ್ ಜೈನ್
ನೇತೃತ್ವದಲ್ಲಿ ಡಿಸಿಪಿ (ಕಾ& ಸು) ಅಂಶು ಕುಮಾರ್,
ಡಿಸಿಪಿ (ಅಪರಾಧ & ಸಂಚಾರ) ದಿನೇಶ್ ಕುಮಾರ್ ಹಾಗೂ ಸಹಾಯಕ ಪೊಲೀಸ್ ಆಯುಕ್ತ ಮಹೇಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ನಡೆಸಿದ್ದು ಬರ್ಕೆ ಪೊಲೀಸ್ ಠಾಣಾ ಪೊಲೀಸ್ ಇನ್ಸ್ ಪೆಕ್ಟರ್ ನಾಗೇಶ್ ಎಸ್ ಹಸ್ತ‌, ರೇಖಾ ಆರ್
ಪಿಎಸ್‌ಐ, ಶೋಭಾ ಪಿ.ಎಸ್.ಐ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು