6:12 PM Sunday1 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಅವಕಾಶಗಳ ಸದುಪಯೋಗದಿಂದ ಜೀವನದ ಯಶಸ್ಸು ನಮ್ಮದಾಗಲು ಸಾಧ್ಯ: ಉಪನ್ಯಾಸಕ ವಿಶ್ವನಾಥ ರೈ

20/03/2022, 23:59

ನೆಲ್ಯಾಡಿ(reporterkarnataka.com) : ಅವಕಾಶಗಳ ಸದುಪಯೋಗದಿಂದ ಜೀವನದ ಯಶಸ್ಸು ನಮ್ಮದಾಗಬೇಕು ಎಂದು ಕೊಕ್ಕಡ ಸರಕಾರಿ ಪಿಯು ಕಾಲೇಜಿನ ಉಪನ್ಯಾಸಕ ವಿಶ್ವನಾಥ ರೈ ಹೇಳಿದರು.

ನೆಲ್ಯಾಡಿ ಬೆಥನಿ ಕೈಗಾರಿಕಾ ತರಬೇತಿ ಸಂಸ್ಥೆ ಜ್ಞಾನೋದಯ ಬೆಥನಿ ಪದವಿಪೂರ್ವ ಕಾಲೇಜಿನ ಸಿಲ್ವರ್ ಜೂಬಿಲಿ ಸಭಾಂಗಣದಲ್ಲಿ ನಡೆಸಿದ ಆನ್ಲೈನ್ ಜಾನಪದ ಗೀತ ಗಾಯನ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ನಿರ್ಧೇಶಕರಾದ ರೆ|ಫಾ| ಸತ್ಯನ್ ತೋಮಸ್ ಮಾತನಾಡಿ, ವಿದ್ಯಾರ್ಥಿಗಳು ಜೀವನದ ಕಷ್ಟಗಳನ್ನು ಎದುರಿಸಿ ಯಶಸ್ಸು ಕಾಣಲಿ ಎಂದು ಶುಭ ಹಾರೈಸಿದರು.  

ವೇದಿಕೆಯಲ್ಲಿ ಜ್ಞಾನೋದಯ ಬೆಥನಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರೆ|ಫಾ| ತೋಮಸ್ ಬಿಜಿಲಿ ಒ.ಐ.ಸಿ,, ಸಂಸ್ಥೆಯ ಪ್ರಾಂಶುಪಾಲರಾದ ಸಜಿ.ಕೆ.ತೋಮಸ್, ತರಬೇತಿ ಅಧಿಕಾರಿ ಜೋನ್ ಪಿ.ಎಸ್. ಉಪಸ್ಥಿತರಿದ್ದು ಶುಭ ಹಾರೈಸಿದರು. ಕಿರಿಯ ತರಬೇತಿ ಅಧಿಕಾರಿ ಸುಬ್ರಾಯ ನಾಯಕ್ ಸ್ವಾಗತಿಸಿದರು. ತರಬೇತಿ ಅಧಿಕಾರಿ ಜೋನ್ ಪಿ.ಎಸ್. ವಂದಿಸಿದರು. ಕಿರಿಯ ತರಬೇತಿ ಅಧಿಕಾರಿ ಹರಿಪ್ರಸಾದ್ ರೈ ಬಿ ಕಾರ್ಯಕ್ರಮ ನಿರೂಪಿಸಿದರು. 

ಆನ್ಲೈನ್ ಜಾನಪದ ಗೀತ ಗಾಯನ ಸ್ಪರ್ಧೆಯಲ್ಲಿ ಜ್ಞಾನೋದಯ ಬೆಥನಿ ಪ್ರೌಢಶಾಲಾ ವಿದ್ಯಾರ್ಥಿಗಳು ಪ್ರಥಮ ಹಾಗೂ ಬಿಷಪ್ ಪೋಳಿಕಾರ್ಪಸ್ ಪಬ್ಳಿಕ್ ಸ್ಕೂಲ್  ಉದನೆ ದ್ವಿತೀಯ ಸ್ಥಾನ ಪಡೆದುಕೊಂಡು ನಗದು ಬಹುಮಾನ ಹಾಗೂ ಪ್ರಶಸ್ತಿಪತ್ರ ತಮ್ಮದಾಗಿಸಿಕೊಂಡರು. ಸ್ಪರ್ಧೆಯಲ್ಲಿ ಒಟ್ಟು 13 ಶಾಲೆಗಳು ಭಾಗವಹಿಸಿದ್ದು ಎಲ್ಲಾ ತಂಡಗಳಿಗೂ ಭಾಗವಹಿಸುವಿಕೆಯ ಪ್ರಮಾಣಪತ್ರ ನೀಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು