4:09 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಅವಕಾಶಗಳ ಸದುಪಯೋಗದಿಂದ ಜೀವನದ ಯಶಸ್ಸು ನಮ್ಮದಾಗಲು ಸಾಧ್ಯ: ಉಪನ್ಯಾಸಕ ವಿಶ್ವನಾಥ ರೈ

20/03/2022, 23:59

ನೆಲ್ಯಾಡಿ(reporterkarnataka.com) : ಅವಕಾಶಗಳ ಸದುಪಯೋಗದಿಂದ ಜೀವನದ ಯಶಸ್ಸು ನಮ್ಮದಾಗಬೇಕು ಎಂದು ಕೊಕ್ಕಡ ಸರಕಾರಿ ಪಿಯು ಕಾಲೇಜಿನ ಉಪನ್ಯಾಸಕ ವಿಶ್ವನಾಥ ರೈ ಹೇಳಿದರು.

ನೆಲ್ಯಾಡಿ ಬೆಥನಿ ಕೈಗಾರಿಕಾ ತರಬೇತಿ ಸಂಸ್ಥೆ ಜ್ಞಾನೋದಯ ಬೆಥನಿ ಪದವಿಪೂರ್ವ ಕಾಲೇಜಿನ ಸಿಲ್ವರ್ ಜೂಬಿಲಿ ಸಭಾಂಗಣದಲ್ಲಿ ನಡೆಸಿದ ಆನ್ಲೈನ್ ಜಾನಪದ ಗೀತ ಗಾಯನ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ನಿರ್ಧೇಶಕರಾದ ರೆ|ಫಾ| ಸತ್ಯನ್ ತೋಮಸ್ ಮಾತನಾಡಿ, ವಿದ್ಯಾರ್ಥಿಗಳು ಜೀವನದ ಕಷ್ಟಗಳನ್ನು ಎದುರಿಸಿ ಯಶಸ್ಸು ಕಾಣಲಿ ಎಂದು ಶುಭ ಹಾರೈಸಿದರು.  

ವೇದಿಕೆಯಲ್ಲಿ ಜ್ಞಾನೋದಯ ಬೆಥನಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರೆ|ಫಾ| ತೋಮಸ್ ಬಿಜಿಲಿ ಒ.ಐ.ಸಿ,, ಸಂಸ್ಥೆಯ ಪ್ರಾಂಶುಪಾಲರಾದ ಸಜಿ.ಕೆ.ತೋಮಸ್, ತರಬೇತಿ ಅಧಿಕಾರಿ ಜೋನ್ ಪಿ.ಎಸ್. ಉಪಸ್ಥಿತರಿದ್ದು ಶುಭ ಹಾರೈಸಿದರು. ಕಿರಿಯ ತರಬೇತಿ ಅಧಿಕಾರಿ ಸುಬ್ರಾಯ ನಾಯಕ್ ಸ್ವಾಗತಿಸಿದರು. ತರಬೇತಿ ಅಧಿಕಾರಿ ಜೋನ್ ಪಿ.ಎಸ್. ವಂದಿಸಿದರು. ಕಿರಿಯ ತರಬೇತಿ ಅಧಿಕಾರಿ ಹರಿಪ್ರಸಾದ್ ರೈ ಬಿ ಕಾರ್ಯಕ್ರಮ ನಿರೂಪಿಸಿದರು. 

ಆನ್ಲೈನ್ ಜಾನಪದ ಗೀತ ಗಾಯನ ಸ್ಪರ್ಧೆಯಲ್ಲಿ ಜ್ಞಾನೋದಯ ಬೆಥನಿ ಪ್ರೌಢಶಾಲಾ ವಿದ್ಯಾರ್ಥಿಗಳು ಪ್ರಥಮ ಹಾಗೂ ಬಿಷಪ್ ಪೋಳಿಕಾರ್ಪಸ್ ಪಬ್ಳಿಕ್ ಸ್ಕೂಲ್  ಉದನೆ ದ್ವಿತೀಯ ಸ್ಥಾನ ಪಡೆದುಕೊಂಡು ನಗದು ಬಹುಮಾನ ಹಾಗೂ ಪ್ರಶಸ್ತಿಪತ್ರ ತಮ್ಮದಾಗಿಸಿಕೊಂಡರು. ಸ್ಪರ್ಧೆಯಲ್ಲಿ ಒಟ್ಟು 13 ಶಾಲೆಗಳು ಭಾಗವಹಿಸಿದ್ದು ಎಲ್ಲಾ ತಂಡಗಳಿಗೂ ಭಾಗವಹಿಸುವಿಕೆಯ ಪ್ರಮಾಣಪತ್ರ ನೀಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು