10:55 AM Sunday12 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ…

ಇತ್ತೀಚಿನ ಸುದ್ದಿ

ಅವನು ನಾನಲ್ಲ, ವೀಡಿಯೊ ನನ್ನದಲ್ಲ: ಕೇಂದ್ರ  ಮಾಜಿ ಸಚಿವ, ಬಿಜೆಪಿ ಸಂಸದ ದೇವರಗುಂಡ ಸದಾನಂದ ಗೌಡ ಸ್ಪಷ್ಟನೆ

20/09/2021, 18:15

ಬೆಂಗಳೂರು(reporterkarnataka.com): ವಿಡಿಯೊದಲ್ಲಿ ಇರುವುದು ನಾನಲ್ಲ. ಈ ಕುರಿತು ಅಧಿಕಾರಿಗಳಿಗೆ ದೂರು ನೀಡಿದ್ದೇನೆ. ನನ್ನ ಮಾರ್ಫ್ ಮಾಡಿದ (ನಕಲಿ) ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ಎಂದು ಕೇಂದ್ರ ಮಾಜಿ ಸಚಿವ, ಬಿಜೆಪಿ ಸಂಸದ ಡಿ.ವಿ.ಸದಾನಂದ ಗೌಡ ಸ್ಪಷ್ಟನೆ ನೀಡಿದ್ದಾರೆ.

ನನ್ನ ವಿರೋಧಿಗಳು ನನ್ನ ನಿಷ್ಪಕ್ಷಪಾತ ವ್ಯಕ್ತಿತ್ವವನ್ನು ಹಾಳುಮಾಡಲು ಇದನ್ನು ನಿರ್ಮಿಸಿದ್ದಾರೆ ಎಂದು ಟ್ವಿಟರ್ ಮತ್ತು ಫೇಸ್‌ಬುಕ್‌ ನಲ್ಲಿ ಅವರು ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

ಆತ್ಮೀಯ ಹಿತೈಷಿಗಳೇ, ನನ್ನ ಮಾರ್ಫ್ ಮಾಡಿದ (ನಕಲಿ) ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ಎಂದು ಅವರು ಬರೆದಿದ್ದಾರೆ.

ಸದಾನಂದ ಗೌಡ ಅವರು ಕೇಂದ್ರ ಸಂಪುಟ ಪುನಾರಚಣೆ ವೇಳೆ ತನ್ನ ವಿರುದ್ಧ ಯಾವುದೇ ಮಾನಹಾನಿಕರ ವೀಡಿಯೊ ಬಿಡುಗಡೆ ಮಾಡದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು