5:12 PM Saturday14 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

ಅವಿರತ ಪ್ರತಿಷ್ಠಾನದಿಂದ ಬಣಕಲ್ ವಿಲೇಜ್ ಶಾಲೆಯಲ್ಲಿ ನೋಟ್ ಪುಸ್ತಕ ವಿತರಣೆ

07/07/2024, 18:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಅವಿರತ ಪ್ರತಿಷ್ಠಾನದ ವತಿಯಿಂದ ಬಣಕಲ್ ವಿಲೇಜ್ ಶಾಲೆಯಲ್ಲಿ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು.
ಅವಿರತ ಪ್ರತಿಷ್ಠಾನದ ಪರವಾಗಿ ಮಾತನಾಡಿದ ಸುಜ್ಞಾನ್ ಗ್ರಾಮೀಣ ಭಾಗದ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ಅವಿರತ ಪ್ರತಿಷ್ಠಾನ ನಾಡಿನೆಲ್ಲೆಡೆ ತನ್ನದೇ ಕೊಡುಗೆ ನೀಡುತ್ತಾ ಬಂದಿದ್ದು, ಅದರಲ್ಲಿ ನೋಟ್ ಬುಕ್ ವಿತರಣೆಯು ಪ್ರಮುಖ ಕಾರ್ಯಕ್ರಮವಾಗಿದೆ ಎಂದರು.
ಶಾಲಾ ಮುಖ್ಯ ಶಿಕ್ಷಕರಾದ ಶಿವಮೂರ್ತಿ ಮಾತನಾಡಿ ಅವಿರತ ಪ್ರತಿಷ್ಠಾನದವರಿಗೆ ಧನ್ಯವಾದಗಳನ್ನು ಅರ್ಪಿಸಿದರು. ಅಲ್ಲದೇ ಬಣಕಲ್ ವಿಲೇಜ್ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಸೇರಿದಂತೆ ತಂತ್ರಜ್ಞಾನ ಆಧಾರಿತ ಆಧುನಿಕ ಶಿಕ್ಷಣ ಕ್ರಮಗಳನ್ನು ಅಳವಡಿಸಿ ಕೊಂಡಿದ್ದು ಬಣಕಲ್ ಸುತ್ತಮುತ್ತಲಿನ ಜನರು ತಮ್ಮ ಮಕ್ಕಳನ್ನು ಶಾಲೆಗೆ ದಾಖಲಿಸುವ ಮೂಲಕ ಸೌಲಭ್ಯಗಳ ಸದುಪಯೋಗ ಪಡಿಸಿಕೊಳ್ಳ ಬೇಕು ಎಂದು ಮನವಿ ಮಾಡಿದರು.
ಶಾಲಾ ಶಿಕ್ಷಕರಾದ ಪೂರ್ಣೇಶ್ ಮತ್ತಾವರ, ಎಸ್.ಡಿ.ಎಂ.ಸಿ ಸದಸ್ಯರು, ಪೋಷಕರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು