12:48 AM Sunday23 - August 2026
ಬ್ರೇಕಿಂಗ್ ನ್ಯೂಸ್
*ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಇತ್ತೀಚಿನ ಸುದ್ದಿ

ಅವಿರತ ಪ್ರತಿಷ್ಠಾನದಿಂದ ಬಣಕಲ್ ವಿಲೇಜ್ ಶಾಲೆಯಲ್ಲಿ ನೋಟ್ ಪುಸ್ತಕ ವಿತರಣೆ

07/07/2024, 18:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಅವಿರತ ಪ್ರತಿಷ್ಠಾನದ ವತಿಯಿಂದ ಬಣಕಲ್ ವಿಲೇಜ್ ಶಾಲೆಯಲ್ಲಿ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು.
ಅವಿರತ ಪ್ರತಿಷ್ಠಾನದ ಪರವಾಗಿ ಮಾತನಾಡಿದ ಸುಜ್ಞಾನ್ ಗ್ರಾಮೀಣ ಭಾಗದ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ಅವಿರತ ಪ್ರತಿಷ್ಠಾನ ನಾಡಿನೆಲ್ಲೆಡೆ ತನ್ನದೇ ಕೊಡುಗೆ ನೀಡುತ್ತಾ ಬಂದಿದ್ದು, ಅದರಲ್ಲಿ ನೋಟ್ ಬುಕ್ ವಿತರಣೆಯು ಪ್ರಮುಖ ಕಾರ್ಯಕ್ರಮವಾಗಿದೆ ಎಂದರು.
ಶಾಲಾ ಮುಖ್ಯ ಶಿಕ್ಷಕರಾದ ಶಿವಮೂರ್ತಿ ಮಾತನಾಡಿ ಅವಿರತ ಪ್ರತಿಷ್ಠಾನದವರಿಗೆ ಧನ್ಯವಾದಗಳನ್ನು ಅರ್ಪಿಸಿದರು. ಅಲ್ಲದೇ ಬಣಕಲ್ ವಿಲೇಜ್ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಸೇರಿದಂತೆ ತಂತ್ರಜ್ಞಾನ ಆಧಾರಿತ ಆಧುನಿಕ ಶಿಕ್ಷಣ ಕ್ರಮಗಳನ್ನು ಅಳವಡಿಸಿ ಕೊಂಡಿದ್ದು ಬಣಕಲ್ ಸುತ್ತಮುತ್ತಲಿನ ಜನರು ತಮ್ಮ ಮಕ್ಕಳನ್ನು ಶಾಲೆಗೆ ದಾಖಲಿಸುವ ಮೂಲಕ ಸೌಲಭ್ಯಗಳ ಸದುಪಯೋಗ ಪಡಿಸಿಕೊಳ್ಳ ಬೇಕು ಎಂದು ಮನವಿ ಮಾಡಿದರು.
ಶಾಲಾ ಶಿಕ್ಷಕರಾದ ಪೂರ್ಣೇಶ್ ಮತ್ತಾವರ, ಎಸ್.ಡಿ.ಎಂ.ಸಿ ಸದಸ್ಯರು, ಪೋಷಕರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು