12:26 PM Thursday15 - May 2025
ಬ್ರೇಕಿಂಗ್ ನ್ಯೂಸ್
ಮಂಗಳೂರು: ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ;… Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ…

ಇತ್ತೀಚಿನ ಸುದ್ದಿ

ಅಯನಾ ವಿ. ರಮಣ್ ಗೆ ಅವಳಿ ಡಿಸ್ಟಿಂಕ್ಷನ್ : ಕಲಿಕೆಗೂ ಜೈ, ಭರತನಾಟ್ಯಕ್ಕೂ ಸೈ!

29/03/2022, 22:33

ಮೂಡುಬಿದಿರೆ(reporterkarnataka.com) : ಇಲ್ಲಿನ ಬಹುಮುಖ ಪ್ರತಿಭೆಯ ಅಯನಾ ವಿ. ರಮಣ್ 2022 – 23ರ ಶೈಕ್ಷಣಿಕ ವರ್ಷದಲ್ಲಿ ಎರಡು ವಿಚಾರಗಳಲ್ಲಿ ವಿಶೇಷ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಅವಳಿ ಡಿಸ್ಟಿಂಕ್ಷನ್ ನ ಅಪರೂಪದ ಸಾಧನೆ ದಾಖಲಿಸಿದ್ದಾರೆ.

ವಿದುಷಿ ಶಾರದಾ ಮಣಿ ಶೇಖರ್ ಶಿಷ್ಯೆಯಾಗಿ , ಕರ್ನಾಟಕ ಪ್ರೌಡ ಶಿಕ್ಷಣ ಪರೀಕ್ಷಾ ಮಡಳಿ ನಡೆಸುವ ಭರತ ನಾಟ್ಯದ ಅಂತಿಮ ವಿದ್ವತ್ ಪರೀಕ್ಷೆ ಯಲ್ಲಿ ಅತ್ಯುತ್ತಮವಾದ ಅಂಕಗಳೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಿದ್ದಾರೆ.

ಕೋವಿಡ್ ಕಾರಣದಿಂದಾಗಿ ತಡವಾಗಿ ಘೋಷಣೆಯಾದ ಮಂಗಳೂರು ವಿಶ್ವವಿದ್ಯಾಲಯದ ಪದವಿ ಎರಡನೆ ಸೆಮಿಸ್ಟರ್ ಪರೀಕ್ಷಾ ಫಲಿತಾಂಶ ಇದೀಗ ಪ್ರಕಟವಾಗಿದ್ದು ಅಯನಾ ಅದರಲ್ಲೂ ಡಿಸ್ಟಿಂಕ್ಷನ್ ಸಾಧಿಸಿದ್ದಾರೆ.

ಭರತ ನಾಟ್ಯದ ಸಾಧನೆಗಾಗಿ ಕೇಂದ್ರ ಸರಕಾರದ ಸಿ ಸಿ ಆರ್ ಟಿ ಸ್ಕಾಲರ್ಶಿಪ್ ಪಡೆಯುತ್ತಿರುವ ಅಯನಾ , ಪದವಿ ಕಲಿಕೆಗಾಗಿಯೂ ಶೈಕ್ಷಣಕ ವಿದ್ಯಾರ್ಥಿ ವೇತನ ಪಡೆಯುತ್ತಿದ್ದಾರೆ.

ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ದ್ವಿತೀಯ ಕಲಾ ಪದವಿ ವಿದ್ಯಾರ್ಥಿಯಾಗಿರುವ ಅಯನಾ. ವಿ.ರಮಣ್ ಅವರು, ಕಲಾವಿದ ಕೆ. ವಿ. ರಮಣ್ – ಆಳ್ವಾಸ್ ಉಪನ್ಯಾಸಕಿ ಡಾ. ಮುಕಾಂಬಿಕಾ ಜಿ. ಎಸ್.ದಂಪತಿಯ ಪುತ್ರಿ.

ಬೆಂಗಳೂರಿನ ವಿದ್ವಾನ್ ಸತ್ಯನಾರಾಯಣರಾಜು ಅವರಲ್ಲಿ ಭರತನಾಟ್ಯದ ವಿಶೇಷ ತರಬೇತಿ ಪಡೆಯುತ್ತಿರುವ ಅಯನಾ , ತನ್ನ ಎಂಟನೇ ತರಗತಿಯಿಂದಲೇ ಆಳ್ವಾಸ್ ದತ್ತು ಸ್ವೀಕಾರದ ವಿದ್ಯಾರ್ಥಿಯಾಗಿರುವುದನ್ನು ಇಲ್ಲಿ ನೆನಪಿಸಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು