5:21 PM Sunday26 - April 2026
ಬ್ರೇಕಿಂಗ್ ನ್ಯೂಸ್
ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ?

ಇತ್ತೀಚಿನ ಸುದ್ದಿ

ಅಯನಾ ವಿ. ರಮಣ್ ಗೆ ಅವಳಿ ಡಿಸ್ಟಿಂಕ್ಷನ್ : ಕಲಿಕೆಗೂ ಜೈ, ಭರತನಾಟ್ಯಕ್ಕೂ ಸೈ!

29/03/2022, 22:33

ಮೂಡುಬಿದಿರೆ(reporterkarnataka.com) : ಇಲ್ಲಿನ ಬಹುಮುಖ ಪ್ರತಿಭೆಯ ಅಯನಾ ವಿ. ರಮಣ್ 2022 – 23ರ ಶೈಕ್ಷಣಿಕ ವರ್ಷದಲ್ಲಿ ಎರಡು ವಿಚಾರಗಳಲ್ಲಿ ವಿಶೇಷ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಅವಳಿ ಡಿಸ್ಟಿಂಕ್ಷನ್ ನ ಅಪರೂಪದ ಸಾಧನೆ ದಾಖಲಿಸಿದ್ದಾರೆ.

ವಿದುಷಿ ಶಾರದಾ ಮಣಿ ಶೇಖರ್ ಶಿಷ್ಯೆಯಾಗಿ , ಕರ್ನಾಟಕ ಪ್ರೌಡ ಶಿಕ್ಷಣ ಪರೀಕ್ಷಾ ಮಡಳಿ ನಡೆಸುವ ಭರತ ನಾಟ್ಯದ ಅಂತಿಮ ವಿದ್ವತ್ ಪರೀಕ್ಷೆ ಯಲ್ಲಿ ಅತ್ಯುತ್ತಮವಾದ ಅಂಕಗಳೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಿದ್ದಾರೆ.

ಕೋವಿಡ್ ಕಾರಣದಿಂದಾಗಿ ತಡವಾಗಿ ಘೋಷಣೆಯಾದ ಮಂಗಳೂರು ವಿಶ್ವವಿದ್ಯಾಲಯದ ಪದವಿ ಎರಡನೆ ಸೆಮಿಸ್ಟರ್ ಪರೀಕ್ಷಾ ಫಲಿತಾಂಶ ಇದೀಗ ಪ್ರಕಟವಾಗಿದ್ದು ಅಯನಾ ಅದರಲ್ಲೂ ಡಿಸ್ಟಿಂಕ್ಷನ್ ಸಾಧಿಸಿದ್ದಾರೆ.

ಭರತ ನಾಟ್ಯದ ಸಾಧನೆಗಾಗಿ ಕೇಂದ್ರ ಸರಕಾರದ ಸಿ ಸಿ ಆರ್ ಟಿ ಸ್ಕಾಲರ್ಶಿಪ್ ಪಡೆಯುತ್ತಿರುವ ಅಯನಾ , ಪದವಿ ಕಲಿಕೆಗಾಗಿಯೂ ಶೈಕ್ಷಣಕ ವಿದ್ಯಾರ್ಥಿ ವೇತನ ಪಡೆಯುತ್ತಿದ್ದಾರೆ.

ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ದ್ವಿತೀಯ ಕಲಾ ಪದವಿ ವಿದ್ಯಾರ್ಥಿಯಾಗಿರುವ ಅಯನಾ. ವಿ.ರಮಣ್ ಅವರು, ಕಲಾವಿದ ಕೆ. ವಿ. ರಮಣ್ – ಆಳ್ವಾಸ್ ಉಪನ್ಯಾಸಕಿ ಡಾ. ಮುಕಾಂಬಿಕಾ ಜಿ. ಎಸ್.ದಂಪತಿಯ ಪುತ್ರಿ.

ಬೆಂಗಳೂರಿನ ವಿದ್ವಾನ್ ಸತ್ಯನಾರಾಯಣರಾಜು ಅವರಲ್ಲಿ ಭರತನಾಟ್ಯದ ವಿಶೇಷ ತರಬೇತಿ ಪಡೆಯುತ್ತಿರುವ ಅಯನಾ , ತನ್ನ ಎಂಟನೇ ತರಗತಿಯಿಂದಲೇ ಆಳ್ವಾಸ್ ದತ್ತು ಸ್ವೀಕಾರದ ವಿದ್ಯಾರ್ಥಿಯಾಗಿರುವುದನ್ನು ಇಲ್ಲಿ ನೆನಪಿಸಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು