9:23 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಬಿಜೆಪಿಯಲ್ಲಿ ರಾಜೀನಾಮೆ ಪರ್ವ: ಟಿಕೆಟ್ ಘೋಷಣೆಗೂ ಮುನ್ನ ಪಕ್ಷಕ್ಕೆ ಗುಡ್ ಬೈ ಘೋಷಿಸಿದ ಆಯನೂರು ಮಂಜುನಾಥ್

19/04/2023, 14:48

ಶಿವಮೊಗ್ಗ(reporterkarnataka.com): ಶಿವಮೊಗ್ಗ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಆಯನೂರು ಮಂಜುನಾಥ್ ಅವರು ಟಿಕೆಟ್ ಘೋಷಣೆಗೂ ಮುನ್ನ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

ಜತೆಗೆ ವಿಧಾನ ಪರಿಷತ್ ಸದಸ್ಯತ್ವಕ್ಕೂ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.ಬಿಜೆಪಿ ಅಭ್ಯರ್ಥಿ ಗಳ ಪಟ್ಟಿ ಬಿಡುಗಡೆಯಾಗಲಾರಂಭಿಸಿದ ದಿನದಿಂದ ಪಕ್ಷಕ್ಕೆ ರಾಜೀನಾಮೆ ನೀಡುವವರ ಸಂಖ್ಯೆ ಹೆಚ್ಚಾಗಿದೆ. ಮಾಜಿ ಸಿಎಂ ಜಗದೀಶ ಶೆಟ್ಟರ್ ಹಾಗೂ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರು ಈಗಾಗಲೇ ರಾಜೀನಾಮೆ ನೀಡಿ ಕಾಂಗ್ರೆಸ್ ನಿಂದ ಸ್ಪರ್ಧಿಸುತ್ತಿದ್ದಾರೆ.

ಇದು ಉತ್ತರ ಕರ್ನಾಟಕ ಭಾಗದಲ್ಲಿ ಬಿಜೆಪಿಗೆ ದೊಡ್ಡ ಹೊಡೆತ ಎಂದೇ ಪರಿಗಣಿಸಲಾಗಿದೆ. ಇದರೊಂದಿಗೆ ಮಲೆನಾಡು ಭಾಗದ ಪ್ರಮುಖ ನಾಯಕ ಆಯನೂರು ಮಂಜುನಾಥ‌ ಅವರು ಪಕ್ಷಕ್ಕೆ ರಾಜೀನಾಮೆ ಘೋಷಿಸಿದ್ದಾರೆ‌. ಟಿಕೆಟ್ ಕೈತಪ್ಪುವುದು ಖಾತ್ರಿಯಾಗುತ್ತಿದ್ದಂತೆ ಮಂಜುನಾಥ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಜೆ ರಾಜೀನಾಮೆ ಪ್ರಕಟಿಸಿದ್ದಾರೆ‌. ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಅವರು ಘೊಷಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು