4:33 AM Saturday11 - July 2026
ಬ್ರೇಕಿಂಗ್ ನ್ಯೂಸ್
ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ…

ಇತ್ತೀಚಿನ ಸುದ್ದಿ

ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಮೂರ್ತಿ ಪ್ರತಿಷ್ಠಾಪನೆ: ಮಂಗಳೂರಿನಲ್ಲಿ ಭಾರೀ ಬಂದೋಬಸ್ತ್; ಬಾರ್, ಮದ್ಯದಂಗಡಿ ಬಂದ್

20/01/2024, 22:27

ಸಾಂದರ್ಭಿಕ ಚಿತ್ರ
ಮಂಗಳೂರು(reporterkarnataka.com): ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಜನವರಿ 22ರಂದು ಶ್ರೀರಾಮನ ಮೂರ್ತಿ ಪ್ರತಿಷ್ಟಾಪನೆ ಪ್ರಯುಕ್ತ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದ ರೀತಿಯಲ್ಲಿ ವ್ಯಾಪಕ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಸಾರ್ವಜನಿಕ ಹಿತದೃಷ್ಟಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಈ ಕೆಳಕಂಡ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಮಂಗಳೂರು ನಗರದಲ್ಲಿ ದೇವಸ್ಥಾನ ಮತ್ತು ಮಂದಿರಗಳಲ್ಲಿ ಒಟ್ಟು 196 ಕಡೆಗಳಲ್ಲಿ ಪೂಜೆ, ಧಾರ್ಮಿಕ ಕಾರ್ಯಕ್ರಮ ನಡೆಯುವ ಸ್ಥಳಗಳನ್ನು ಗುರುತಿಸಲಾಗಿದೆ.
 131 ಸೂಕ್ಷ್ಮ ಪ್ರದೇಶಗಳಲ್ಲಿ ಹಗಲು ರಾತ್ರಿ ಪಿಕೆಟಿಂಗ್ ನೇಮಿಸಿ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.
 ನಗರದಾದ್ಯಂತ 57 ಸೆಕ್ಟರ್ ಮೊಬೈಲ್ 24 ಗಂಟೆ ಹಗಲು ರಾತ್ರಿ ಗಸ್ತಿನಲ್ಲಿರುವ ವ್ಯವಸ್ಥೆಯನ್ನು ಮಾಡಲಾಗಿದೆ.
 14 ಸ್ಥಳಗಳಲ್ಲಿ ಚೆಕ್ ಪಾಯಿಂಟ್ ಗಳನ್ನು ನಿಯೋಜಿಸಲಾಗಿದೆ.
 9 ಸಿಎಆರ್ ಮತ್ತು 3 ಕೆಎಸ್ಆರ್ ಪಿ ತುಕಡಿಗಳನ್ನು ನಿಯೋಜಿಸಲಾಗಿದೆ.
 ತಡರಾತ್ರಿ ಮತ್ತು ಮುಂಜಾನೆ ವಿಶೇಷ ಗಸ್ತುಗಳನ್ನು ಆಯೋಜಿಸಲಾಗಿದೆ.
 ಮಂಗಳೂರು ನಗರದ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ವಿಧ್ವಂಸಕ ತಪಾಸಣಾ ತಂಡದಿಂದ ತಪಾಸಣೆ ನಡೆಸಲಾಗುತ್ತಿದೆ.
 ರಾಜ್ಯದಲ್ಲಿ ಅಳವಡಿಸಲಾದ ಕ್ರಮದಂತೆ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಮೆರವಣಿಗೆ, ರ್ಯಾಲಿಗಳಿಗೆ ಅನುಮತಿ ನೀಡಿರುವುದಿಲ್ಲ.
 ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಆಯಾ ಎ.ಸಿ.ಪಿ ರವರ ಮಾರ್ಗದರ್ಶನದಲ್ಲಿ ಈಗಾಗಲೇ ಶಾಂತಿ ಸಭೆಗಳನ್ನು ಆಯೋಜಿಸಲಾಗಿರುತ್ತದೆ.
 ಪ್ರತೀ ಪೊಲೀಸ್ ಠಾಣಾ ಮಟ್ಟದಲ್ಲಿ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸುವಲ್ಲಿ ಏರಿಯಾ ಡಾಮಿನೇಷನ್ ಮತ್ತು ರೂಟ್ ಮಾರ್ಚ್ ಕೈಗೊಳ್ಳಲಾಗಿದೆ.
 ಮಹಾನಗರ ಪಾಲಿಕೆಯೊಂದಿಗೆ ಸಮನ್ವಯ ಸಾದಿಸಿ ಫ್ಲೆಕ್ಸ್, ಬ್ಯಾನರ್ ಬಂಟಿಂಗ್ಸ್ ಅಳವಡಿಕೆಗಳ ಮೇಲೆ ಸೂಕ್ತ ನಿಗಾ ಇರಿಸಲಾಗಿದೆ ಮತ್ತು ಆಯೋಜಕರಿಗೆ ಅವುಗಳ ಭದ್ರತೆಯನ್ನು ಖಚಿತಪಡಿಸಲು ಸೂಚಿಸಲಾಗಿದೆ.
 ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ದಿನಾಂಕ: 21-01-2024ರ ಮದ್ಯರಾತ್ರಿಯಿಂದ ದಿನಾಂಕ: 23-01-2024 ರ ಮುಂಜಾನೆಯ ವರೆಗೆ ನಗರದಲ್ಲಿರುವ ಎಲ್ಲಾ ರೀತಿಯ ಬಾರ್ ಮತ್ತು ಮದ್ಯ ಮಾರಾಟ ಮಳಿಗೆಗಳನ್ನು ಮುಚ್ಚಿಸುವಂತೆ ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.
 ಮಂಗಳೂರ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಒಟ್ಟಾರೆಯಾಗಿ 3-ಡಿಸಿಪಿ, ೦6-ಎಸಿಪಿ, 11-ಪಿ.ಐ ಮತ್ತು 37-ಪಿ.ಎಸ್.ಐ ದರ್ಜೆಯ ಅಧಿಕಾರಿಗಳನ್ನು ಹಾಗೂ 781 ಪೊಲೀಸ್ ಸಿಬ್ಬಂದಿಗಳನ್ನು ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಲಾಗಿರುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು