9:36 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಅಯೋಧ್ಯೆ ಬಾಲರಾಮನಿಗೆ 70 ಲಕ್ಷ ರೂ. ಮೌಲ್ಯದ ಸ್ವರ್ಣ ಪೀಠ ಪ್ರಭಾವಳಿ ಸಮರ್ಪಣೆ: ಕಾಶಿಮಠ ಸಂಸ್ಥಾನದಿಂದ ಕೊಡುಗೆ

12/02/2024, 21:51

ಮಂಗಳೂರು(reporterkarnataka.com): ಕಾಶಿಮಠ ಸಂಸ್ಥಾನದ ವತಿಯಿಂದ ಅಯೋಧ್ಯೆಯ ಬಾಲರಾಮನಿಗೆ 70 ಲಕ್ಷ ರೂಪಾಯಿ ಮೌಲ್ಯದ ಸ್ವರ್ಣ ಪೀಠ ಪ್ರಭಾವಳಿಯನ್ನು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ನೇತೃತ್ವದಲ್ಲಿ ನಡೆಯುತ್ತಿರುವ ಮಂಡಲೋತ್ಸವದಲ್ಲಿ ಬಾಲರಾಮನ ಉತ್ಸವ ಮೂರ್ತಿಗೆ ಸಮರ್ಪಿಸಲಾಯಿತು.

ಈ ಸ್ವರ್ಣ ಪೀಠ ಪ್ರಭಾವಳಿಗೆ ಕೋಟದ ಕಾಶಿಮಠದಲ್ಲಿ ಅದ್ದೂರಿ ಮೆರವಣಿಗೆ ಹಾಗೂ ಧಾರ್ಮಿಕ ವಿಧಿ ವಿಧಾನಗಳನ್ನು ಪೂರೈಸಿ ಕಾಶೀಮಠಾಧೀಶರಾದ ಪರಮಪೂಜ್ಯ ಶ್ರೀಮದ್ಸ ಯಮೀಂದ್ರತೀರ್ಥ ಸ್ವಾಮೀಜಿಯವರು ತಮ್ಮ ಅಮೃತ ಹಸ್ತದಿಂದ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರಿಗೆ ಹಸ್ತಾಂತರಿಸುವ ಮೂಲಕ ಅಯೋಧ್ಯೆಗೆ ಕಳುಹಿಸಲಾಗಿತ್ತು. ಮೊನ್ನೆಯಷ್ಟೇ ಕಾಶಿಮಠ ಸಂಸ್ಥಾನದ ವತಿಯಿಂದ ಅಯೋಧ್ಯೆಯ ಬಾಲರಾಮನಿಗೆ ಬೆಳ್ಳಿಯ ಪಲ್ಲಕ್ಕಿಯೂ ಸಮರ್ಪಣೆಯಾಗಿದ್ದು ಇಲ್ಲಿ ಗಮನಾರ್ಹ.
ಇದು ನನ್ನ ಜೀವನದ ಪರಮ ಪವಿತ್ರ ಭಾಗ್ಯವಾಗಿದ್ದು ಪರಮಪೂಜ್ಯ ಗುರುಗಳ ಹಾಗೂ ಪ್ರಭು ಶ್ರೀರಾಮನ ಸೇವಾ ಕಾರ್ಯಕ್ಕಿಂತ ಮಿಗಿಲಾದುದು ಬೇರಾವುದೂ ಇಲ್ಲವೆಂದು ಶಾಸಕರು ಇದೇ ವೇಳೆ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು