4:14 AM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಅಯೋಧ್ಯೆಯಲ್ಲಿ ರಾಮಲಲ್ಲಾನಾಗಿ ಬೆಳಗಿದ ಕರ್ನಾಟಕದ ಶಿಲೆ: ಮೈಸೂರು ಹಾರೋಹಳ್ಳಿಯಲ್ಲಿ ಭೂಮಿಪೂಜೆ; ಮಂದಿರ ನಿರ್ಮಾಣದ ಸಂಕಲ್ಪ

22/01/2024, 13:46

ಭೀಮಣ್ಣ ಪೂಜಾರಿ ಶಿರನಾಳ ಮೈಸೂರು

info.reporterkarnataka@gmail.com

ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಿಸಿದ ಭವ್ಯ ಮಂದಿರದಲ್ಲಿ ಇಂದು ಪ್ರಾಣ ಪ್ರತಿಷ್ಠೆ ಮಾಡಲಾದ ಶ್ರೀರಾಮಲಲ್ಲಾ ವಿಗ್ರಹಕ್ಕೆ ಶಿಲೆಯನ್ನು ಒದಗಿಸಿದ ಮೈಸೂರಿನ ಹಾರೋಹಳ್ಳಿಯಲ್ಲಿ ಇಂದು ಭೂಮಿ ಪೂಜೆ ನಡೆಸಲಾಯಿತು.


ಮೈಸೂರಿನ‌ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರಕ್ಕೆ ಒಳಪಟ್ಟ ಗುಜ್ಜೇಗೌಡನಪುರ ಗ್ರಾಮದ ವ್ಯಾಪ್ತಿಯಲ್ಲಿ ಹಾರೋಹಳ್ಳಿ ಪ್ರದೇಶವಿದೆ. ಈ ಹಾರೋಹಳ್ಳಿ ಪ್ರದೇಶದ ಎಚ್. ರಾಮದಾಸ ಎಂಬ ಸಾಮಾನ್ಯ ರೈತನ ಜಮೀನಿನಲ್ಲಿ ದೊರೆತ ಶಿಲೆಯಿಂದ ರಾಮಲಲ್ಲಾನ ವಿಗ್ರಹ ಮೂಡಿ ಬಂದಿದೆ. ವ್ಯವಸಾಯಕ್ಕೆ ಅಡ್ಡಿಯಾಗುತ್ತದೆ ಎಂಬ ಕಾರಣಕ್ಕೆ ರಾಮದಾಸ ಅವರು ತನ್ನ ಜಮೀನಿನಿಂದ ಈ‌ ಶಿಲೆಯನ್ನು ತೆಗೆಸಿದ್ದರು. ಇಂದು ಆ ಶಿಲೆ ಇಡೀ ಜಗತ್ತೇ ನೋಡಬಲ್ಲ ರಾಮಲಲ್ಲಾನಾಗಿ ಎದ್ದು ನಿಂತಿದೆ. ಈ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ ಶ್ರೀರಾಮ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ವೇಳೆಯಲ್ಲಿ ಇಲ್ಲಿ ಭೂಮಿ ಪೂಜೆ ನಡೆಸಲಾಗಿದೆ. ಇಲ್ಲಿ ಶ್ರೀರಾಮ ಮಂದಿರ ನಿರ್ಮಿಸುವ ಸಂಕಲ್ಪವನ್ನು ರಾಮದಾಸರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು