11:16 PM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಆಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಲೋಕರ್ಪಣೆಯಿಂದ ಪ್ರತಿ ಗ್ರಾಮದಲ್ಲಿ ಸೌಹಾರ್ದತೆ, ಸೋದರತೆ ಬೆಳೆಯಲಿ: ಸ್ಪೀಕರ್ ಯು.ಟಿ. ಖಾದರ್ ಹಾರೈಕೆ

09/01/2024, 19:52

ಮಂಗಳೂರು(reporterkarnataka.com): ಅಯೋಧ್ಯೆಯಲ್ಲಿ ಜನವರಿ 22 ರಂದು ಲೋಕಾರ್ಪಣೆಗೊಳ್ಳಲಿರುವ ಶ್ರೀರಾಮ ಮಂದಿರ ಕಾರ್ಯಕ್ರಮಕ್ಕೆ ವಿಧಾನ ಸಭಾ ಸ್ಪೀಕರ್ ಯು.ಟಿ. ಖಾದರ್ ಶುಭ ಹಾರೈಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಯೋಧ್ಯೆಯ ಭವ್ಯವಾದ ರಾಮ ಮಂದಿರದಿಂದ ನಮ್ಮ ದೇಶಕ್ಕೆ ಕೀರ್ತಿ ಬರುವ ವಿಚಾರ ಆಗಲಿ ಮತ್ತು ನಮ್ಮ ಸಮಾಜದ ಪ್ರತಿ ಗ್ರಾಮದಲ್ಲೂ ಸೌಹಾರ್ದತೆ, ಸೋದರತೆ, ಪ್ರೀತಿ ವಿಶ್ವಾಸ ನೆಲೆಗೊಳ್ಳಲು ಇದೊಂದು ಪ್ರೇರಣೆಯಾಗುವ ಕಾರ್ಯಕ್ರಮ ಆಗಲಿ. ಈ ಕಾರ್ಯಕ್ರಮಕ್ಕೆ ಸಂತೋಷದಿಂದ ನಾನು ಶುಭಾಶಯ ಸಲ್ಲಿಸುತ್ತೇನೆ ಎಂದಿದ್ದಾರೆ.
ಆಹ್ವಾನ ಬಂದ್ರೆ ಉದ್ಘಾಟನೆಗೆ ಹೋಗ್ತೀರಾ ಅನ್ನೊ‌ ಪ್ರಶ್ನೆಗೆ ಸಮಯಾವಕಾಶ, ಅವಕಾಶ ಸಿಕ್ಕಿದಂತಹ ಸಂದರ್ಭದಲ್ಲಿ ಎಲ್ಲರೂ ಕೂಡ ಹೋಗಬಹುದು. ಉದ್ಘಾಟನೆಗೆ ಹೋದರೆ ಅದರಲ್ಲಿ ತಪ್ಪಿಲ್ಲ ಎಂದ ಖಾದರ್ ನಮ್ಮ ಸಮಾಜ ಹಾಗೂ ದೇಶವನ್ನು ಒಗ್ಗಟ್ಟು ಮಾಡುವ ಸಮಾರಂಭ ಆಗಬೇಕು ಅಂತಾ ನಾನು ಹೇಳ ಬಯಸುತ್ತೇನೆ ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು