5:01 PM Tuesday20 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಅಯ್ಯಪ್ಪ ಮಾಲಾಧಾರಿಗಳ ಸಾವು: ಮಾನವೀಯತೆ ಮೆರೆದ ನಂಜನಗೂಡಿನ ಶಾಸಕ ದರ್ಶನ್ ಧ್ರುವನಾರಾಯಣ್

19/01/2024, 18:13

*ಸುಳಿಗೆ ಸಿಲುಕಿ ಪ್ರಾಣ ಕಳೆದುಕೊಂಡ ಮೂವರ ಮಾಲಧಾರಿಗಳ ಶವ ಪತ್ತೆ*

*ಕಪಿಲಾ ನದಿಯಲ್ಲಿ ಪ್ರಾಣ ಕಳೆದುಕೊಂಡ ಮೂವರು ಮಾಲಧಾರಿಗಳ ಕುಟುಂಬಕ್ಕೆ ಸ್ಥಳದಲ್ಲಿಯೇ ವೈಯಕ್ತಿಕ ಪರಿಹಾರ ನೀಡಿದ ಶಾಸಕ ದರ್ಶನ್ ಧ್ರುವನಾರಾಯಣ*

*ಮಾಲಾಧಾರಿಗಳ ಸ್ವಗ್ರಾಮಕ್ಕೆ ಶವ ತಲುಪಿಸಲು ಉಚಿತ ವಾಹನ ವ್ಯವಸ್ಥೆ ಕಲ್ಪಿಸಿದ ಶಾಸಕ ದರ್ಶನ್ ಧ್ರುವನಾರಾಯಣ*

ಮೋಹನ್ ನಂಜನಗೂಡು ಮೈಸೂರು

info reporterkarnataka@gmail.com
ದಕ್ಷಿಣ ಕಾಶಿ ನಂಜನಗೂಡಿನ ಕಪಿಲಾ ನದಿಯ ಹೆಜ್ಜೆಗೆ ಸೇತುವೆಯ ಬಳಿ ಸುಳಿಗೆ ಸಿಲುಕಿ ಮೂವರು ಮಾಲಾದಾರಿಗಳು ಸಾವನ್ನಪ್ಪಿರುವ ವಿಚಾರ ತಿಳಿದು ನಂಜನಗೂಡಿನ ಶಾಸಕ ದರ್ಶನ್ ಧ್ರುವ ನಾರಾಯಣ್ ತಾಲೂಕಿನಲ್ಲಿ ನಡೆಯುತ್ತಿದ್ದ ಗಣರಾಜ್ಯೋತ್ಸವ ಪೂರ್ವಭಾವಿ ಸಭೆಯನ್ನು ಅರ್ಧಕ್ಕೆ ಮೋಟಕುಗೊಳಿಸಿ ಘಟನೆ ಸ್ಥಳಕ್ಕೆ ಧಾವಿಸಿ ಅಗ್ನಿಶಾಮಕ ಠಾಣೆಯ ಸಿಬ್ಬಂದಿಗಳು ಮತ್ತು ಪೊಲೀಸರಿಗೆ ಸಾವನಪ್ಪಿರುವ ಮೂವರ ಮಾಲಾದಾರಿಗಳ ಶವವನ್ನು ಹೊರ ತೆಗೆಯಲು ಚುರುಕುಕರ ಚರಣೆ ನಡೆಸಬೇಕು ಆದಷ್ಟು ಬೇಗ ಮೃತ ಮಾಲಾಧಾರಿಗಳ ಶವವನ್ನು ಅವರ ಸ್ವಗ್ರಾಮಕ್ಕೆ ರವಾನಿಸಬೇಕು ಎಂದು ಅಧಿಕಾರಿಗಳಿಗೆ ತಾಕಿತು ಮಾಡಿದರು.
ಕೂಡಲೇ ಶಾಸಕರ ಮಾತಿಗೆ ಎಚ್ಚೆತ ಅಗ್ನಿಶಾಮಕ ಮತ್ತು ಪೊಲೀಸ್ ಅಧಿಕಾರಿಗಳು ನದಿಯಲ್ಲಿ ಕಾರ್ಯಾಚರಣೆಯನ್ನು ಚುರುಕುಗೊಳಿಸಿ ಸಾವನಪ್ಪಿದ ಮೂವರು ಮಾಲದಾರಿಗಳ ಶವವನ್ನು ಹೊರ ತೆಗೆದು ಶಾಸಕ ದರ್ಶನ್ ಧ್ರುವ ನಾರಾಯಣ ಸ್ಥಳದಲ್ಲಿ ಕಣ್ಣೀರಿಟ್ಟು ಮೂವರಿಗೆ ವೈಯಕ್ತಿಕ ಪರಿಹಾರ ನೀಡಿ ಉಚಿತ ವಾಹನದ ವ್ಯವಸ್ಥೆಯನ್ನು ಕಲ್ಪಿಸಿ ಮೃತ ಮಾಲದಾರಿಗಳ ಸ್ವಗ್ರಾಮಕ್ಕೆ ಶವಗಳು ತೆರಳಲು ಅನುವು ಮಾಡಿಕೊಟ್ಟರು.

ಶಾಸಕ ದರ್ಶನ್ ಧ್ರುವ ನಾರಾಯಣ್ ರವರ ಮಾನವೀಯ ಕಳಕಳಿಯನ್ನು ಸ್ಥಳದಲ್ಲಿ ಗಮನಿಸಿದ ನಂಜನಗೂಡಿನ ಜನತೆ ಮತ್ತು ಭಕ್ತ ಸಮೂಹ ಕ್ಷಣ ಕಾಲ ಮೌನಕ್ಕೆ ಶರಣಾದರು.

ಇತ್ತೀಚಿನ ಸುದ್ದಿ

ಜಾಹೀರಾತು