2:08 AM Saturday11 - July 2026
ಬ್ರೇಕಿಂಗ್ ನ್ಯೂಸ್
ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ…

ಇತ್ತೀಚಿನ ಸುದ್ದಿ

ಅಯ್ಯಪ್ಪ ಮಾಲಾಧಾರಿಗಳ ಸಾವು: ಮಾನವೀಯತೆ ಮೆರೆದ ನಂಜನಗೂಡಿನ ಶಾಸಕ ದರ್ಶನ್ ಧ್ರುವನಾರಾಯಣ್

19/01/2024, 18:13

*ಸುಳಿಗೆ ಸಿಲುಕಿ ಪ್ರಾಣ ಕಳೆದುಕೊಂಡ ಮೂವರ ಮಾಲಧಾರಿಗಳ ಶವ ಪತ್ತೆ*

*ಕಪಿಲಾ ನದಿಯಲ್ಲಿ ಪ್ರಾಣ ಕಳೆದುಕೊಂಡ ಮೂವರು ಮಾಲಧಾರಿಗಳ ಕುಟುಂಬಕ್ಕೆ ಸ್ಥಳದಲ್ಲಿಯೇ ವೈಯಕ್ತಿಕ ಪರಿಹಾರ ನೀಡಿದ ಶಾಸಕ ದರ್ಶನ್ ಧ್ರುವನಾರಾಯಣ*

*ಮಾಲಾಧಾರಿಗಳ ಸ್ವಗ್ರಾಮಕ್ಕೆ ಶವ ತಲುಪಿಸಲು ಉಚಿತ ವಾಹನ ವ್ಯವಸ್ಥೆ ಕಲ್ಪಿಸಿದ ಶಾಸಕ ದರ್ಶನ್ ಧ್ರುವನಾರಾಯಣ*

ಮೋಹನ್ ನಂಜನಗೂಡು ಮೈಸೂರು

info reporterkarnataka@gmail.com
ದಕ್ಷಿಣ ಕಾಶಿ ನಂಜನಗೂಡಿನ ಕಪಿಲಾ ನದಿಯ ಹೆಜ್ಜೆಗೆ ಸೇತುವೆಯ ಬಳಿ ಸುಳಿಗೆ ಸಿಲುಕಿ ಮೂವರು ಮಾಲಾದಾರಿಗಳು ಸಾವನ್ನಪ್ಪಿರುವ ವಿಚಾರ ತಿಳಿದು ನಂಜನಗೂಡಿನ ಶಾಸಕ ದರ್ಶನ್ ಧ್ರುವ ನಾರಾಯಣ್ ತಾಲೂಕಿನಲ್ಲಿ ನಡೆಯುತ್ತಿದ್ದ ಗಣರಾಜ್ಯೋತ್ಸವ ಪೂರ್ವಭಾವಿ ಸಭೆಯನ್ನು ಅರ್ಧಕ್ಕೆ ಮೋಟಕುಗೊಳಿಸಿ ಘಟನೆ ಸ್ಥಳಕ್ಕೆ ಧಾವಿಸಿ ಅಗ್ನಿಶಾಮಕ ಠಾಣೆಯ ಸಿಬ್ಬಂದಿಗಳು ಮತ್ತು ಪೊಲೀಸರಿಗೆ ಸಾವನಪ್ಪಿರುವ ಮೂವರ ಮಾಲಾದಾರಿಗಳ ಶವವನ್ನು ಹೊರ ತೆಗೆಯಲು ಚುರುಕುಕರ ಚರಣೆ ನಡೆಸಬೇಕು ಆದಷ್ಟು ಬೇಗ ಮೃತ ಮಾಲಾಧಾರಿಗಳ ಶವವನ್ನು ಅವರ ಸ್ವಗ್ರಾಮಕ್ಕೆ ರವಾನಿಸಬೇಕು ಎಂದು ಅಧಿಕಾರಿಗಳಿಗೆ ತಾಕಿತು ಮಾಡಿದರು.
ಕೂಡಲೇ ಶಾಸಕರ ಮಾತಿಗೆ ಎಚ್ಚೆತ ಅಗ್ನಿಶಾಮಕ ಮತ್ತು ಪೊಲೀಸ್ ಅಧಿಕಾರಿಗಳು ನದಿಯಲ್ಲಿ ಕಾರ್ಯಾಚರಣೆಯನ್ನು ಚುರುಕುಗೊಳಿಸಿ ಸಾವನಪ್ಪಿದ ಮೂವರು ಮಾಲದಾರಿಗಳ ಶವವನ್ನು ಹೊರ ತೆಗೆದು ಶಾಸಕ ದರ್ಶನ್ ಧ್ರುವ ನಾರಾಯಣ ಸ್ಥಳದಲ್ಲಿ ಕಣ್ಣೀರಿಟ್ಟು ಮೂವರಿಗೆ ವೈಯಕ್ತಿಕ ಪರಿಹಾರ ನೀಡಿ ಉಚಿತ ವಾಹನದ ವ್ಯವಸ್ಥೆಯನ್ನು ಕಲ್ಪಿಸಿ ಮೃತ ಮಾಲದಾರಿಗಳ ಸ್ವಗ್ರಾಮಕ್ಕೆ ಶವಗಳು ತೆರಳಲು ಅನುವು ಮಾಡಿಕೊಟ್ಟರು.

ಶಾಸಕ ದರ್ಶನ್ ಧ್ರುವ ನಾರಾಯಣ್ ರವರ ಮಾನವೀಯ ಕಳಕಳಿಯನ್ನು ಸ್ಥಳದಲ್ಲಿ ಗಮನಿಸಿದ ನಂಜನಗೂಡಿನ ಜನತೆ ಮತ್ತು ಭಕ್ತ ಸಮೂಹ ಕ್ಷಣ ಕಾಲ ಮೌನಕ್ಕೆ ಶರಣಾದರು.

ಇತ್ತೀಚಿನ ಸುದ್ದಿ

ಜಾಹೀರಾತು