11:20 AM Tuesday10 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಅಝದಿ ಕಿ ಅಮೃತ ಮಹೋತ್ಸವ: ಮಂಗಳೂರು ವಿವಿ ಕಾಲೇಜಿನಲ್ಲಿ ರಾಷ್ಟ್ರಮಟ್ಟದ ವಿಚಾರ ಸಂಕಿರಣ

10/08/2022, 21:56

ಮಂಗಳೂರು(reporterkarnataka.com): ವಿಶ್ವ ವಿದ್ಯಾನಿಲಯ ಕಾಲೇಜಿನ ಆಂತರಿಕ ಗುಣಮಟ್ಟ ಸಂಘ,ವಿಭಾಗದ ವತಿಯಿಂದ ಅಝದಿ ಕಿ ಅಮೃತ ಮಹೋತ್ಸವದ ಅಂಗವಾಗಿ ಒಂದು ದಿನದ ರಾಷ್ಟ್ರ ಮಟ್ಟದ ವಿಚಾರ ಸಂಕೀರಣ ರವೀಂದ್ರ ಕಲಾಭವನದಲ್ಲಿ ಜರುಗಿತು.


ಕಾರ್ಯಕ್ರಮವನ್ನು ಉದ್ಘಾಟಿಸಿದ ಗೋವಾ ವಿಶ್ವ ವಿದ್ಯಾ ನಿಲಯದ ನಿವೃತ್ತ ಪ್ರಾಧ್ಯಾಪಕ ಡಾ.ಎನ್.ಶಾಮ್ ಭಟ್ ಅವರು ಮಾತನಾಡಿ, ಕರಾವಳಿಯ ಸ್ಥಳೀಯ  ಹೋರಾಟಗಾರರು ಸ್ವಾತಂತ್ರ್ಯದ ಜೊತೆಗೆ ಅಸ್ಪ್ರಶ್ಯತೆಯ ನಿವಾರಣೆಗೆ ನೀಡಿದಂತಹ ಕೊಡುಗೆ, ಉಪ್ಪಿನ ಸತ್ಯಾಗ್ರಹದಲ್ಲಿ ಸ್ಥಳೀಯರು ತೊಡಗಿಸಿಕೊಂಡ  ರೀತಿ ವಿಶೇಷವಾದದ್ದು. ತಮ್ಮ ಪ್ರೀತಿಯ ಚಿನ್ನಾಭರಣಗಳನ್ನು ನೀಡಿ ಸ್ವಾತಂತ್ರ್ಯದ ಚಳುವಳಿಗೆ ಸಹಕಾರ ನೀಡಿದ ಮಹಿಳೆಯರ ತ್ಯಾಗ ಅತ್ಯಮೂಲ್ಯವಾದದು. ಅದರಂತೆ ನಾವು ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಬೇಕು ಎಂದು ಅವರು ಕರೆ ನೀಡಿದರು.



ಮುಖ್ಯ ಅತಿಥಿಯಾಗಿ ಮಂಗಳೂರು ವಿಶ್ವ ವಿದ್ಯಾನಿಲಯದ ಇತಿಹಾಸ ವಿಭಾಗದ ಪ್ರೊ.ಕೆ.ಎಂ ಲೋಕೇಶ್ ಮಾತನಾಡಿ, ಸ್ವಾತಂತ್ರ್ಯಕ್ಕಾಗಿ ನಡೆದ ಬಲಿದಾನದ ಜತೆಗೆ ಸ್ವಾತಂತ್ರ್ಯ ನಂತರ ದಿನಗಳಲ್ಲಿ ನಡೆದ ವಿದ್ಯಮಾನಗಳಿಂದ  ನಮ್ಮ ದೇಶದ ಪ್ರಜಾಪ್ರಭುತ್ವವನ್ನು ಉಳಿಸಿಕೊಟ್ಟ ಯೋಧರ ಬಲಿದಾನವನ್ನು ಗೌರವಿಸಬೇಕಾಗಿದೆ ಎಂದರು.

ಅಧ್ಯಕ್ಷತೆಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ಉಪ ಕುಲಪತಿ ಪ್ರೊ.
.ಪಿ. ಸುಬ್ರಮಣ್ಯ ಯಡಪಡಿತ್ತಾಯ ವಹಿಸಿದ್ದರು.
ಅವರು ಮಾತನಾಡಿ, ಸ್ವಾತಂತ್ರ್ಯ ತಂದುಕೊಟ್ಟ ಮಹನೀಯರನ್ನು ನಾವು ನೆನಪಿಸಿಕೊಳ್ಳಬೇಕು.
ಸ್ವಾತಂತ್ರ್ಯ ಸಿಕ್ಕಿದೆ ಎಂದು ಉದಾಸೀನತೆ ತೋರದೆ ಅದನ್ನು ಕಾಪಾಡುವ ಮನಸ್ಥಿತಿಯನ್ನು ಬೆಳೆಸಿಕೊಳ್ಳಬೇಕು. ನಾವು ಅಸಡ್ಡೆ ತೋರಿದರೆ ಇನ್ನು ಮುಂದಿನ 25 ವರ್ಷಗಳಲ್ಲಿ ಕಷ್ಟದ ಸಂದರ್ಭಗಳನ್ನು ನಾವು ಎದುರಿಸಬೇಕಾಗುತ್ತದೆ ಎಂದು ಅವರು ಹೇಳಿದರು.
ಪ್ರಧಾನಿ ಮೋದಿಜಿ ಅವರ ಹರ್ಗರ್ ತಿರಂಗ ಎನ್ನುವ ನಿಟ್ಟಿನಲ್ಲಿ ಮನೆ ಮನೆಯಲ್ಲಿ ಸ್ವಾತಂತ್ರ್ಯದ ಹೋರಾಟಗಾರರನ್ನು ನೆನೆಸಿಕೊಳ್ಳುವ ಉದ್ದೇಶದಿಂದ, ದೇಶಪ್ರೇಮವನ್ನು ಸಾರುವ  ಸಂಕೇತವಾಗಿ ತಿರಂಗ ಆರಿಸಿ ಎಂದು ಕರೆ ನೀಡಿದರು.


ಕಾಲೇಜಿನ ಪ್ರಾಂಶುಪಾಲೆ ಡಾ.ಅನುಸೂಯ ರೈ, ಕಾರ್ಯಾಗಾರದ ಸಂಯೋಜಕ ಡಾ.ಜಯರಾಜ್ ಎನ್., ಹಿಂದಿ ಸ್ನಾತಕೋತ್ತರ ವಿಭಾಗದ ಸಂಯೋಜಕಿ ಡಾ. ನಾಗರತ್ನ ರಾವ್, ಹಿಂದಿ ವಿಭಾಗದ ಮುಖ್ಯಸ್ಥೆ ಸುಮನ ಟಿ. ರೋಡನ್ನವರ್, ಸೋಶಿಯಾಲಜಿ ವಿಭಾಗದ ಮುಖ್ಯಸ್ಥೆ ಗಾಯತ್ರಿ ಎನ್. ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು