4:59 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಅಝದಿ ಕಿ ಅಮೃತ ಮಹೋತ್ಸವ: ಮಂಗಳೂರು ವಿವಿ ಕಾಲೇಜಿನಲ್ಲಿ ರಾಷ್ಟ್ರಮಟ್ಟದ ವಿಚಾರ ಸಂಕಿರಣ

10/08/2022, 21:56

ಮಂಗಳೂರು(reporterkarnataka.com): ವಿಶ್ವ ವಿದ್ಯಾನಿಲಯ ಕಾಲೇಜಿನ ಆಂತರಿಕ ಗುಣಮಟ್ಟ ಸಂಘ,ವಿಭಾಗದ ವತಿಯಿಂದ ಅಝದಿ ಕಿ ಅಮೃತ ಮಹೋತ್ಸವದ ಅಂಗವಾಗಿ ಒಂದು ದಿನದ ರಾಷ್ಟ್ರ ಮಟ್ಟದ ವಿಚಾರ ಸಂಕೀರಣ ರವೀಂದ್ರ ಕಲಾಭವನದಲ್ಲಿ ಜರುಗಿತು.


ಕಾರ್ಯಕ್ರಮವನ್ನು ಉದ್ಘಾಟಿಸಿದ ಗೋವಾ ವಿಶ್ವ ವಿದ್ಯಾ ನಿಲಯದ ನಿವೃತ್ತ ಪ್ರಾಧ್ಯಾಪಕ ಡಾ.ಎನ್.ಶಾಮ್ ಭಟ್ ಅವರು ಮಾತನಾಡಿ, ಕರಾವಳಿಯ ಸ್ಥಳೀಯ  ಹೋರಾಟಗಾರರು ಸ್ವಾತಂತ್ರ್ಯದ ಜೊತೆಗೆ ಅಸ್ಪ್ರಶ್ಯತೆಯ ನಿವಾರಣೆಗೆ ನೀಡಿದಂತಹ ಕೊಡುಗೆ, ಉಪ್ಪಿನ ಸತ್ಯಾಗ್ರಹದಲ್ಲಿ ಸ್ಥಳೀಯರು ತೊಡಗಿಸಿಕೊಂಡ  ರೀತಿ ವಿಶೇಷವಾದದ್ದು. ತಮ್ಮ ಪ್ರೀತಿಯ ಚಿನ್ನಾಭರಣಗಳನ್ನು ನೀಡಿ ಸ್ವಾತಂತ್ರ್ಯದ ಚಳುವಳಿಗೆ ಸಹಕಾರ ನೀಡಿದ ಮಹಿಳೆಯರ ತ್ಯಾಗ ಅತ್ಯಮೂಲ್ಯವಾದದು. ಅದರಂತೆ ನಾವು ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಬೇಕು ಎಂದು ಅವರು ಕರೆ ನೀಡಿದರು.



ಮುಖ್ಯ ಅತಿಥಿಯಾಗಿ ಮಂಗಳೂರು ವಿಶ್ವ ವಿದ್ಯಾನಿಲಯದ ಇತಿಹಾಸ ವಿಭಾಗದ ಪ್ರೊ.ಕೆ.ಎಂ ಲೋಕೇಶ್ ಮಾತನಾಡಿ, ಸ್ವಾತಂತ್ರ್ಯಕ್ಕಾಗಿ ನಡೆದ ಬಲಿದಾನದ ಜತೆಗೆ ಸ್ವಾತಂತ್ರ್ಯ ನಂತರ ದಿನಗಳಲ್ಲಿ ನಡೆದ ವಿದ್ಯಮಾನಗಳಿಂದ  ನಮ್ಮ ದೇಶದ ಪ್ರಜಾಪ್ರಭುತ್ವವನ್ನು ಉಳಿಸಿಕೊಟ್ಟ ಯೋಧರ ಬಲಿದಾನವನ್ನು ಗೌರವಿಸಬೇಕಾಗಿದೆ ಎಂದರು.

ಅಧ್ಯಕ್ಷತೆಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ಉಪ ಕುಲಪತಿ ಪ್ರೊ.
.ಪಿ. ಸುಬ್ರಮಣ್ಯ ಯಡಪಡಿತ್ತಾಯ ವಹಿಸಿದ್ದರು.
ಅವರು ಮಾತನಾಡಿ, ಸ್ವಾತಂತ್ರ್ಯ ತಂದುಕೊಟ್ಟ ಮಹನೀಯರನ್ನು ನಾವು ನೆನಪಿಸಿಕೊಳ್ಳಬೇಕು.
ಸ್ವಾತಂತ್ರ್ಯ ಸಿಕ್ಕಿದೆ ಎಂದು ಉದಾಸೀನತೆ ತೋರದೆ ಅದನ್ನು ಕಾಪಾಡುವ ಮನಸ್ಥಿತಿಯನ್ನು ಬೆಳೆಸಿಕೊಳ್ಳಬೇಕು. ನಾವು ಅಸಡ್ಡೆ ತೋರಿದರೆ ಇನ್ನು ಮುಂದಿನ 25 ವರ್ಷಗಳಲ್ಲಿ ಕಷ್ಟದ ಸಂದರ್ಭಗಳನ್ನು ನಾವು ಎದುರಿಸಬೇಕಾಗುತ್ತದೆ ಎಂದು ಅವರು ಹೇಳಿದರು.
ಪ್ರಧಾನಿ ಮೋದಿಜಿ ಅವರ ಹರ್ಗರ್ ತಿರಂಗ ಎನ್ನುವ ನಿಟ್ಟಿನಲ್ಲಿ ಮನೆ ಮನೆಯಲ್ಲಿ ಸ್ವಾತಂತ್ರ್ಯದ ಹೋರಾಟಗಾರರನ್ನು ನೆನೆಸಿಕೊಳ್ಳುವ ಉದ್ದೇಶದಿಂದ, ದೇಶಪ್ರೇಮವನ್ನು ಸಾರುವ  ಸಂಕೇತವಾಗಿ ತಿರಂಗ ಆರಿಸಿ ಎಂದು ಕರೆ ನೀಡಿದರು.


ಕಾಲೇಜಿನ ಪ್ರಾಂಶುಪಾಲೆ ಡಾ.ಅನುಸೂಯ ರೈ, ಕಾರ್ಯಾಗಾರದ ಸಂಯೋಜಕ ಡಾ.ಜಯರಾಜ್ ಎನ್., ಹಿಂದಿ ಸ್ನಾತಕೋತ್ತರ ವಿಭಾಗದ ಸಂಯೋಜಕಿ ಡಾ. ನಾಗರತ್ನ ರಾವ್, ಹಿಂದಿ ವಿಭಾಗದ ಮುಖ್ಯಸ್ಥೆ ಸುಮನ ಟಿ. ರೋಡನ್ನವರ್, ಸೋಶಿಯಾಲಜಿ ವಿಭಾಗದ ಮುಖ್ಯಸ್ಥೆ ಗಾಯತ್ರಿ ಎನ್. ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು