7:58 AM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

B C Road | ಕೈಕಂಬದಲ್ಲಿ ಬಂಟ್ವಾಳ ವ್ಯವಸಾಯ ಸಂಘದ ‘ಅಕ್ಷಯ ಸೌಧ’ ಲೋಕಾರ್ಪಣೆ

09/06/2025, 23:51

ಬಂಟ್ವಾಳ(reporterkarnataka.com): ಸಹಕಾರಿ ಸಂಘವು ಜನಸಾಮಾನ್ಯರ ಜೊತೆ ಉತ್ತಮ ಸಂಬಂಧವನ್ನು ಇಟ್ಟುಕೊಳ್ಳಬೇಕು. ಪ್ರತಿಯೊಬ್ಬರ ಸಹಕಾರ ಇಲ್ಲದೆ ಸಂಘ ಲಾಭದಾಯಕವಾಗಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ. ಬಂಟ್ವಾಳ ವ್ಯವಸಾಯ ಸಹಕಾರಿ ಸಂಘದ ನೂತನ ಕಟ್ಟಡ ನಿರ್ಮಾಣವಾಗಿ ಲೋಕಾರ್ಪಣೆಯಾಗುತ್ತಿರುವುದು ತಾಲೂಕಿಗೆ ಹೆಮ್ಮೆಯ ವಿಷಯವಾಗಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು.
ಅವರು ಬಿ.ಸಿ.ರೊಡಿನ ಕೈಕಂಬದಲ್ಲಿ ಬಂಟ್ವಾಳ ವ್ಯವಸಾಯ ಸಹಕಾರಿ ಸಂಘದ ನೂತನ ಕಟ್ಟಡ ಅಕ್ಷಯ ಸೌಧದ ಉದ್ಘಾಟನಾ ಸಮಾರಂಭದಲ್ಲಿ ದೀಪಪ್ರಜ್ವಲನೆ ಮಾಡಿ ಮಾತನಾಡಿದರು.
ಕರ್ನಾಟಕ ರಾಜ್ಯಸಹಕಾರ ಮಾರಾಟ ಮಹಾಮಂಡಲದ ಅಧ್ಯಕ್ಷ ಸಹಕಾರ ರತ್ನ ಡಾ. ಎಮ್.ಎನ್. ರಾಜೇಂದ್ರ ಕುಮಾರ್ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದರು, ಅಕ್ಷಯ ಸೌಧ ಜನರಿಗೆ ಅಕ್ಷಯವಾಗಲಿ ಕೃಷಿ ಸಾಲ ಶೂನ್ಯ ಬಡ್ಡಿಯಲ್ಲಿ ಸಿಗುವಂತಾಗಬೇಕು. ಸಹಕಾರಿ ಸಂಘಗಳು ರೈತರ ಸಂಸ್ಥೆಯಾಗಿದ್ದು ಲಾಭದಾಯಕವಾಗಿ ಕಾರ್ಯನಿರ್ವಹಿಸಿ ರೈತರಿಗಾಗಿ ನಿರಂತರ ಸೇವೆಯನ್ನು ಮಾಡಬೇಕು ಎಂದರು.

ಮಾಜಿ ಸಚಿವ ನಾಗರಾಜ ಶೆಟ್ಟಿ ಜಿ.ಆನಂದ ಸಭಾಂಗಣವನ್ನು ಉದ್ಘಾಟಿಸಿ ಮಾತನಾಡಿ ರೈತರಿಗೆ ಮತ್ತು ಬಡವರಿಗೆ ಸಹಕಾರ ನೀಡುವುದರ ಜೊತೆಗೆ ಮಹಿಳೆಯರಿಗೂ ಉತ್ತಮ ಸೇವೆ ಸಹಕಾರಿ ಸಂಘದಿಂದ ಸಿಗುವಂತಾಗಲಿ ಎಂದು ಶುಭಹಾರೈಸಿದರು.
ಗಣಕೀಕರಣವನ್ನು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ನಿರ್ದೇಶಕ ಟಿ.ಜಿ.ರಾಜಾರಾಮ ಭಟ್ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕರಾದ ರುಕ್ಮಯ ಪೂಜಾರಿ, ಕೆ. ಪದ್ಮನಾಭ ಕೊಟ್ಟಾರಿ, ಬಂಟ್ವಾಳ ಪುರಸಭೆ ಅಧ್ಯಕ್ಷ ಟಿ.ವಾಸು ಪೂಜಾರಿ, ಬಂಟ್ವಾಳ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಬೇಬಿ ಕುಂದರ್, ಬಂಟ್ವಾಳ ಭೂಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಅರುಣ್ ರೋಶನ್ ಡಿಸೋಜ, ಬಂಟ್ವಾಳ ಪುರಸಭೆ ಸದಸ್ಯ ಎ.ಗೋವಿಂದ ಪ್ರಭು, ಸದಸ್ಯೆ ಜಯಂತಿ ವಿ. ಬಂಗೇರ ಉಪಸ್ಥಿತರಿದ್ದರು.
ಸಂಘದ ಅಧ್ಯಕ್ಷ ಎಮ್. ಕರುಣೇಂದ್ರ ಪೂಜಾರಿ ಕೊಂಬರಬೈಲು ಮಾತನಾಡಿ ಎಲ್ಲಾ ನಿರ್ದೇಶಕರ ಹಾಗೂ ಸದಸ್ಯರ ಸಹಕಾರದಿಂದ ಉತ್ತಮವಾದ ಅಕ್ಷಯ ಸೌಧ ಕಟ್ಟಡ ನಿರ್ಮಾಣವಾಗಿದೆ ಎಂದು ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಸಂಘದ ಉಪಾಧ್ಯಕ್ಷ ಆದಿರಾಜ ಕೆ. ಜೈನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯನಿರ್ವಹಣಾಧಿಕಾರಿ ಜಯಪ್ರಕಾಶ್ ಕಾಮತ್ ವರದಿ ಮಂಡಿಸಿದರು.
*ಸನ್ಮಾನ:* ಸಹಕಾರ ರತ್ನ ಡಾ. ಎಮ್. ಎನ್. ರಾಜೇಂದ್ರ ಕುಮಾರ್ , ಸಂಘದ ಮಾಜಿ ಅಧ್ಯಕ್ಷ ದಿ. ಜಿ ಆನಂದ ರವರ ಪತ್ನಿ ಶಾರದಾ ಜಿ.ಆನಂದ , ಮಾಜಿ ಅಧ್ಯಕ್ಷ ಪದ್ಮನಾಭ ದೇವಾಡಿಗ , ಸಹಕಾರ ರತ್ನ ರವೀಂದ್ರ ಕಂಬಳಿ, ಇಂಜಿನಿಯರ್ ಸುಧಾಕರ ಕೆ.ಟಿ., ಗುತ್ತಿಗೆದಾರರಾದ ಹರೀಶ್, ನವೀನ್ ರವರನ್ನು ಸನ್ಮಾನಿಸಲಾಯಿತು.
ನಿರ್ದೇಶಕರಾದ ವಿಠಲ ಪೂಜಾರಿ , ಎ.ಲಕ್ಷ್ಮೀ ವಿ. ಪ್ರಭು , ಹರೀಶ್, ಬಿ. ಜಯ ಕುಂದರ್ ,ಮುರಳೀಧರ ಭಟ್ , ಚಂದ್ರಶೇಖರ ಭಂಡಾರಿ, ದಿವಾಕರ ಶೆಟ್ಟಿ , ಪದ್ಮನಾಭ ಗೌಡ , ಗಣೇಶ , ಜಯಂತಿ, ಬಂಟ್ವಾಳ ವಲಯ ಮೇಲ್ವಿಚಾರಕ ಕೀರ್ತಿ ರಾಜ್ ಹಾಗೂ ಶಾಖೆಯ ಸಿಬ್ಬಂದಿಗಳು ಸಹಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು